ತಿರುವನಂತಪುರಂ: ರಾಜ್ಯದಲ್ಲಿ ಇಂದು 7823 ಮಂದಿ ಜನರಿಗೆ ಕೋವಿಡ್ ದೃಢಪಟ್ಟಿದೆ. ತ್ರಿಶೂರ್ 1178, ಎರ್ನಾಕುಳಂ 931, ತಿರುವನಂತಪುರ 902, ಕೋಝಿಕ್ಕೋಡ್ 685, ಕೊಟ್ಟಾಯಂ 652, ಕಣ್ಣೂರು 628, ಪಾಲಕ್ಕಾಡ್ 592, ಕೊಲ್ಲಂ 491, ಆಲಪ್ಪುಳ 425, ಪತ್ತನಂತಿಟ್ಟ 368, ಮಲಪ್ಪುರಂ 366, ಇಡುಕ್ಕಿ 285, ವಯನಾಡ್ 227 ಮತ್ತು ಕಾಸರಗೋಡು 93 ಎಂಬಂತೆ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 86,031 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕು ಜನಸಂಖ್ಯೆಯ ಅನುಪಾತ 10 ಕ್ಕಿಂತ ಹೆಚ್ಚಿರುವ 227 ಸ್ಥಳೀಯಾಡಳಿತ ಪ್ರದೇಶಗಳಲ್ಲಿ 332 ವಾರ್ಡ್ಗಳಿವೆ. ಇಲ್ಲಿ ಕಠಿಣ ನಿಯಂತ್ರಣ ಇರುತ್ತದೆ.
ಪ್ರಸ್ತುತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 3,43,082 ಮಂದಿ ಜನರು ಕಣ್ಗಾವಲಿನಲ್ಲಿ ಇದ್ದಾರೆ. ಇವುಗಳಲ್ಲಿ 3,31,243 ಮಂದಿ ಮನೆ / ಸಾಂಸ್ಥಿಕ ಕ್ವಾರಂಟೈನ್ ಮತ್ತು 11,839 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. 752 ಮಂದಿ ಜನರನ್ನು ಹೊಸದಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಪ್ರಸ್ತುತ, 96,646 ಕೋವಿಡ್ ಪ್ರಕರಣಗಳಲ್ಲಿ ಕೇವಲ 11 ಪ್ರತಿಶತದಷ್ಟು ಜನರು ಮಾತ್ರ ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 106 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 26,448 ಕ್ಕೆ ಏರಿಕೆಯಾಗಿದೆ.
ಇಂದು, ಸೋಂಕು ಪತ್ತೆಯಾದವರಲ್ಲಿ 35 ಮಂದಿ ಹೊರ ರಾಜ್ಯದಿಂದ ಬಂದವರು. 7353 ಮಂದಿ ಜನರು ಸಂಪರ್ಕದ ಮೂಲಕ ಸೋಂಕಿಗೆ ಒಳಗಾಗಿದ್ದಾರೆ. 382 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. 53 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ದೃಢಪಟ್ಟಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ ಒಟ್ಟು 12,490 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 1211, ಕೊಲ್ಲಂ 781, ಪತ್ತನಂತಿಟ್ಟ 1309, ಆಲಪ್ಪುಳ 370, ಕೊಟ್ಟಾಯಂ 753, ಇಡುಕ್ಕಿ 608, ಎರ್ನಾಕುಳಂ 2088, ತ್ರಿಶೂರ್ 1286, ಪಾಲಕ್ಕಾಡ್ 735, ಮಲಪ್ಪುರಂ 1049, ಕೋಝಿಕ್ಕೋಡ್ 1235, ವಯನಾಡ್ 320, ಕಣ್ಣೂರು 590 ಮತ್ತು ಕಾಸರಗೋಡು 155 ಗುಣಮುಖರಾಗಿದ್ದಾರೆ. ಇದರೊಂದಿಗೆ, 96,646 ಮಂದಿ ಜನರು ಸೋಂಕು ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. 46,85,932 ಮಂದಿ ಜನರು ಇಲ್ಲಿಯವರೆಗೆ ಕೋವಿಡ್ನಿಂದ ಮುಕ್ತರಾಗಿದ್ದಾರೆ.




