HEALTH TIPS

'ಪರಿಕ್ರಮ ಸಂತ' ವಿಡಿಯೋ ಅನಾವರಣ

                   ಬದಿಯಡ್ಕ:  ರಾ.ಸ್ವ. ಸಂಘದ ಜ್ಯೇಷ್ಠ ಪ್ರಚಾರಕ ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ಬಗ್ಗೆ ವಿಸ್ತೃತ ಮಾಹಿತಿ ನೀಡುವ ಪರಿಕ್ರಮ ಸಂತ' ಯೂಟ್ಯೂಬ್ ವಿಡಿಯೋವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಂಘಚಾಲಕ  ಗೋಪಾಲ ಚೆಟ್ಟಿಯಾರ್ ಅನಾವರಣಗೊಳಿಸಿದರು. ನೀರ್ಚಾಲಿನ ಮಹಾಜನ ಸಂಸ್ಕøತ ವಿದ್ಯಾಲಯದಲ್ಲಿ ಭಾನುವಾರ ಬೆಳಿಗ್ಗೆ ವಿಡಿಯೋ ಅನಾವರಣದ ಸರಳ ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಉಪಸ್ಥಿತರಿದ್ದು ಮಾತನಾಡಿದ ರಾ.ಸ್ವ. ಸಂಘ ಕರ್ನಾಟಕ ದಕ್ಷಿಣ ಪ್ರಾಂತ ಸಹ ಪ್ರಚಾರ ಪ್ರಮುಖ್  ರಾಜೇಶ್ ಪದ್ಮಾರ್ ಅವರು, ಪರಿಕ್ರಮ ಸಂತ ಸೀತಾರಾಮ ಕೆದಿಲಾಯರು ದೇಶದ ಉದ್ದಗಲಕ್ಕೂ ಸಂಚರಿಸಿ ಗ್ರಾಮಗಳ ಮಹತ್ವವನ್ನು ಸಾರಿದ ಪರಿ ಅನನ್ಯ. ಭಾವಿ ಭಾರತಕ್ಕೆ  ಗ್ರಾಮಗಳೇ ಆಧಾರ. ಗ್ರಾಮಗಳು ದೇಶದ ಸಾಂಸ್ಕೃತಿಕತೆಯ ಪ್ರತೀಕ ಮತ್ತು ಕೇಂದ್ರಗಳು. ಇಷ್ಟು ಮಾತ್ರವಲ್ಲದೆ ಗೋ ಸಂಪತ್ತು, ಸಸ್ಯ ಸಂಪತ್ತು ಸಹಿತ ಕೃಷಿ ಆಧರಿತ ಆರ್ಥಿಕತೆಗೂ ರಹದಾರಿ ಗ್ರಾಮಗಳಾಗಿವೆ ಎಂದು ಹೇಳಿದರು. 

                   ಕಾರ್ಯಕ್ರಮದಲ್ಲಿ ರಾ.ಸ್ವ. ಸಂಘದ ಮಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾ ಪ್ರಮುಖ್ ಬಾಲಕೃಷ್ಣ ನೀರ್ಚಾಲು, ಸುಶಿರ ಎಡಿಟರ್ ಮಹೇಶ ಕೃಷ್ಣ ತೇಜಸ್ವಿ, ಚಿತ್ರ ಕಲಾವಿದ ವಿಶ್ವಾಸ್. ಎಂ, ವಿವೇಕ ಆದಿತ್ಯ, ವಿಜೇಶ್.ಬಿ.ಕೆ ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries