HEALTH TIPS

ಅಲ್ಪಸಂಖ್ಯಾತರ ಶಿಷ್ಯವೇತನ: ಶಬರಿಮಲೆ ಮಹಿಳಾ ಪ್ರವೇಶ ಆದೇಶ ಜಾರಿಯಲ್ಲಿ ತೋರಿದ ಆತುರ ರಾಜ್ಯ ಸರ್ಕಾರಕ್ಕೆ ಈಗ ಏಕಿಲ್ಲ: ಸುರೇಂದ್ರನ್

                                                       

                      ತಿರುವನಂತಪುರ: ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನದ 80:20 ಅನುಪಾತವನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡದಿರುವ ಸುಪ್ರೀಂ ಕೋರ್ಟ್ ತೀರ್ಪು ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ. ಧಾರ್ಮಿಕ ಮೂಲಭೂತವಾದಿಗಳ ಒತ್ತಡಕ್ಕೆ ಮಣಿದು ಒಂದು ವರ್ಗದ ಜನರ ಮೇಲಿನ ಪಕ್ಷಪಾತವನ್ನು ಸರಿಪಡಿಸಲು ಸರ್ಕಾರ ಸಿದ್ಧವಾಗಬೇಕು ಎಂದು ಸುರೇಂದ್ರನ್ ಪ್ರಕಟಣೆಯಲ್ಲಿ ಕೋರಿದ್ದಾರೆ.

                   ಹೈಕೋರ್ಟ್ ತೀರ್ಪಿನ ವಿರುದ್ಧ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಾಗ ರಾಜ್ಯ ಸರ್ಕಾರದ ಜಾತ್ಯತೀತ ನಿಲುವು ಪೆÇಳ್ಳು ಎಂಬುದು ಎಲ್ಲರಿಗೂ ಮನವರಿಕೆಯಾಯಿತು. ಇಬ್ಬರು ಅಲ್ಪಸಂಖ್ಯಾತರನ್ನು ಸಮಾನವಾಗಿ ಕಾಣಲು ಸರ್ಕಾರ ವಿಫಲವಾಗಿದೆ. ಹೀಗಿರುವಾಗ ಶಬರಿಮಲೆ ಮಹಿಳೆಯರ ಪ್ರವೇಶ ಆದೇಶವನ್ನು ಜಾರಿಗೆ ತರಲು ತೋರಿಸಿದ್ದ ಆತುರ ಇಲ್ಲಿ ಯಾಕಿಲ್ಲ ಎಂದೂ ಸುರೇಂದ್ರನ್ ಪ್ರಶ್ನಿಸಿದ್ದಾರೆ.

                   ಅಲ್ಪಸಂಖ್ಯಾತರ ಹಕ್ಕುಗಳನ್ನು ಕೇವಲ ಒಂದು ವರ್ಗಕ್ಕೆ ನೀಡಬಾರದು. ಹಕ್ಕುಗಳು ಎಲ್ಲರಿಗೂ ಸಿಗಬೇಕು ಎಂದು ಕೋರ್ಟ್ ತೀರ್ಪು ನೀಡಿದೆ. ಅದನ್ನು ಜಾರಿಗೊಳಿಸುವ ಹೊಣೆಗಾರಿಕೆ ಸರಕಾರದ್ದು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮುಚ್ಚಿಡುವುದನ್ನು ಕೊನೆಗೊಳಿಸಿ ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸುವ ಧೈರ್ಯವನ್ನು ಹೊಂದಿರಬೇಕು.

                  ಸರಕಾರ ಮತ್ತು ಎಡರಂಗವು ವೋಟ್ ಬ್ಯಾಂಕ್ ಹಿತಾಸಕ್ತಿ ಬದಿಗಿಟ್ಟು ಎಲ್ಲರಿಗೂ ಸಮಾನ ನ್ಯಾಯ ದೊರಕಿಸಿಕೊಡಬೇಕು ಎಂದು ಸುರೇಂದ್ರನ್ ಆಗ್ರಹಿಸಿದ್ದಾರೆ. ಹೈಕೋರ್ಟ್ ತೀರ್ಪಿಗೆ ತಡೆ ನೀಡಬೇಕು ಎಂಬ ರಾಜ್ಯ ಸರ್ಕಾರದ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. . ಹೈಕೋರ್ಟ್ ತೀರ್ಪು ಅಸಾಂವಿಧಾನಿಕ ಎಂದು ಕೇರಳ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries