ಕಾಸರಗೋಡು: ಕನ್ನಡ ಹೋರಾಟಗಾರ, ಜನಸಂಘ, ಬಿಜೆಪಿಯ ಹಿರಿಯ ಮುಖಂಡರಾಗಿದ್ದ ನ್ಯಾಯವಾದಿ ಸುಂದರ ರಾವ್ ಅವರಿಗೆ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯದ ಆಶ್ರಯದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಜರಗಿತು.
ಸೇವಾ ಭಾರತಿ ಅಧ್ಯಕ್ಷ ನ್ಯಾಯವಾದಿ ಸುರೇಶ್ ಅಧ್ಯಕ್ಷತೆ ವಹಿಸಿದರು. ಪೆÇ್ರ.ಎ.ಶ್ರೀನಾಥ್ ಕಾಸರಗೋಡು ಸಂಸ್ಮರಣಾ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಕವಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ, ನಿವೃತ್ತ ಅಧ್ಯಾಪಕ ವಿಶಾಲಾಕ್ಷ ಪುತ್ರಕಳ, ಗ್ರಂಥಾಲಯ ಸ್ಥಾಪಕ ಅಧ್ಯಕ್ಷ ವಾಮನ ರಾವ್ ಬೇಕಲ್, ಕಾರ್ಯದರ್ಶಿ ಜಗದೀಶ್ ಕೂಡ್ಲು, ಸತೀಶ್ ಕೂಡ್ಲು, ಪತ್ರಕರ್ತ ಜಗನ್ನಾಥ, ಕಾರ್ತಿಕ್, ಪ್ರದೀಪ್, ದಯಾನಂದ ಬೆಳ್ಳೂರಡ್ಕ ಮೊದಲಾದವರು ಉಪಸ್ಥಿತರಿದ್ದರು.