HEALTH TIPS

ರಾಜ್ಯದಲ್ಲಿ ಭಾರೀ ಮಳೆ; ಇಡುಕ್ಕಿಯಲ್ಲಿ ರಾತ್ರಿ ಪ್ರಯಾಣ ನಿಷೇಧ

                             ತಿರುವನಂತಪುರಂ: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಹಲವಾರು ಸ್ಥಳಗಳಲ್ಲಿ ಬೃಹತ್  ಪ್ರವಾಹ ವರದಿಯಾಗಿದೆ. ಭಾರೀ ಮಳೆಯ ಕಾರಣ ಹಲವೆಡೆ  ಆರೆಂಜ್  ಅಲರ್ಟ್ ಘೋಶಿಸಲಾಗಿದೆ. ಇಡುಕ್ಕಿ ಜಿಲ್ಲೆಯಲ್ಲಿ ರಾತ್ರಿ ಪ್ರಯಾಣವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

                    ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತದ ಭೀತಿಯ ಸೂಚನೆ ನೀಡಲಾಗಿದೆ. ಮುಂದಿನ ಮೂರು ದಿನಗಳವರೆಗೆ ನಿಷೇಧ ಹೇರಲಾಗಿದೆ.  14 ರವರೆಗೆ ಸಂಜೆ 7 ರಿಂದ ಬೆಳಿಗ್ಗೆ 6 ರವರೆಗೆ ಪ್ರಯಾಣಕ್ಕೆ ಅನುಮತಿ ಇಲ್ಲ. ಜಿಲ್ಲೆಯ ವಿವಿಧೆಡೆ ಭಾರೀ ಮಳೆ ಮುಂದುವರಿದಿದೆ.

                  ಏತನ್ಮಧ್ಯೆ, ಕಣ್ಣೂರಿನ ಆರಾಳಂನಲ್ಲಿ ಅರಣ್ಯ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿರುವ ಸೂಚನೆಗಳಿವೆ. ಈ ಪ್ರದೇಶದಲ್ಲಿ ಕಾಕುವಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿರುವುದು ಮತ್ತು ಸೇತುವೆಯ ಪ್ರವಾಹದಿಂದ ಅನುಮಾನ ಬಲಗೊಂಡಿದೆ. ಕಣ್ಣೂರಿನಲ್ಲಿ, ಇರಿಟ್ಟಿ, ಅರಳಂ ಮತ್ತು ಕಾಕುವ ಪ್ರದೇಶಗಳಲ್ಲಿ ಜನರು ಜಾಗರೂಕರಾಗಿರಬೇಕು ಎಂದು ಎಚ್ಚರಿಕೆ ನೀಡಲಾಗಿದೆ.

                ಅಟ್ಟಪ್ಪಾಡಿ, ಪಾಲಕ್ಕಾಡ್ ನಲ್ಲಿ ಪ್ರವಾಹದಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿತು. ಅರಣ್ಯದಲ್ಲಿ ಭೂಕುಸಿತ ಉಂಟಾಗಿದೆ ಎಂದು ವರದಿಯಾಗಿದೆ. ಪರಿಣಾಮವಾಗಿ, ಮಂದನಪೆÇಟ್ಟಿ ಸೇತುವೆ ಮುಳುಗಡೆಯಾಗಿದೆ.  ಸಂಚಾರ ಅಸ್ತವ್ಯಸ್ತಗೊಂಡಿತು.

                     ಶುಕ್ರವಾರದವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries