ಸಮರಸ ಚಿತ್ರ ಸುದ್ದಿ: ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಕುಂಟಾರು ರವೀಶ್ ತಂತ್ರಿ ಅವರನ್ನು ನಿರ್ಗಮಿತ ಅಧ್ಯಕ್ಷ ಹಾಗೂ ಕೇರಳ ರಾಜ್ಯ ಸಮಿತಿ ಕಾರ್ಯದರ್ಶಿಯಾಗಿ ಆಯ್ಕೆಯಾದ ನ್ಯಾಯವಾದಿ ಕೆ. ಶ್ರೀಕಾಂತ್ ಅವರು ಶಾಲುಹೊದಿಸಿ ಬರಮಾಡಿಕೊಂಡರು. ರಾಜ್ಯ ಸಮಿತಿ ಉಪಾಧ್ಯಕ್ಷ ಸದಾನಂದನ್ ಮಾಸ್ತರ್, ವಲಯ ಉಪಾಧ್ಯಕ್ಷ ಸತೀಶ್ಚಂದ್ರ ಭಂಡಾರಿ ಕೋಳಾರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ. ವೇಲಾಯುಧನ್ ಉಪಸ್ಥಿತರಿದ್ದರು.




