ನವದೆಹಲಿ: ಕಾಂಗ್ರೆಸ್ ಪಕ್ಷವು ತೈಲ ಬೆಲೆ ಏರಿಕೆ ಮತ್ತು ಹಣದುಬ್ಬರದ ವಿರುದ್ಧ ಡಿಸೆಂಬರ್ 12ರಂದು 'ಮೆಹಂಗಾಯಿ ಹಟಾವೋ' ರ್ಯಾಲಿಯನ್ನು ಹಮ್ಮಿಕೊಂಡಿದೆ.
0
samarasasudhi
ನವೆಂಬರ್ 27, 2021
ನವದೆಹಲಿ: ಕಾಂಗ್ರೆಸ್ ಪಕ್ಷವು ತೈಲ ಬೆಲೆ ಏರಿಕೆ ಮತ್ತು ಹಣದುಬ್ಬರದ ವಿರುದ್ಧ ಡಿಸೆಂಬರ್ 12ರಂದು 'ಮೆಹಂಗಾಯಿ ಹಟಾವೋ' ರ್ಯಾಲಿಯನ್ನು ಹಮ್ಮಿಕೊಂಡಿದೆ.
'ದೇಶದ ಜನರ ಗಮನವನ್ನು ತೈಲ ಬೆಲೆ ಏರಿಕೆ ಮತ್ತು ಹಣದುಬ್ಬರದತ್ತ ಸೆಳೆಯುವ ನಿಟ್ಟಿನಲ್ಲಿ ಪಕ್ಷವು ಡಿಸೆಂಬರ್ 12ರಂದು 'ಮೆಹಂಗಾಯಿ ಹಟಾವೋ' ರ್ಯಾಲಿಯನ್ನು ನಡೆಸಲಿದೆ.
'ಮೋದಿ ಸರ್ಕಾರ ಲೂಟಿಯನ್ನು ನಿಲ್ಲಿಸಬೇಕು ಮತ್ತು ತೈಲ ದರವನ್ನು ಇಳಿಸಬೇಕು.ಅಲ್ಲಿಯವರೆಗೆ ನಾವು ಆಂದೋಲನ ಮುಂದುವರಿಸಲಿದ್ದೇವೆ' ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
'ಭಾರತದ ನಾಗರಿಕರು ಕ್ರೂರತನ ಮತ್ತು ಹೇಳಲಾಗದ ನೋವನ್ನು ಅನುಭವಿಸುತ್ತಿದ್ದಾರೆ. ದೈನಂದಿನ ಅಗತ್ಯ ವಸ್ತುಗಳನ್ನು ಪಡೆಯಲು ಜನರು ಕಷ್ಟಪಡುತ್ತಿದ್ದಾರೆ. ಇವೆಲ್ಲವನ್ನೂ ಮೋದಿ ಸರ್ಕಾರ ನಿರ್ಲಕ್ಷ್ಯಿಸುತ್ತಿದೆ. ಕೆಲವೊಂದು ಎಲೆಕ್ಟ್ರಾನಿಕ್ ಮಾಧ್ಯಮಗಳು ಇದನ್ನು ಬೆಂಬಲಿಸುತ್ತಿವೆ. ಅಲ್ಲದೆ, ಜನರ ದಿಕ್ಕು ತಪ್ಪಿಸಲು ಧಾರ್ಮಿಕ ಭಾವನೆಯನ್ನು ಮೋದಿ ಸರ್ಕಾರ ಬಳಸುತ್ತಿದೆ' ಎಂದು ಅವರು ದೂರಿದರು.