ತಿರುಪತಿ: ಬುಡಕಟ್ಟು ಸಮುದಾಯಗಳ ಗೌರವಾರ್ಥವಾಗಿ ಇನ್ನು ಮುಂದೆ ಪ್ರತಿ ವರ್ಷದ ನವೆಂಬರ್ 15 ಅನ್ನು 'ಜನಜಾತೀಯ (ಬುಡಕಟ್ಟು ಜನರ) ಗೌರವ ದಿನ' ಎಂದು ಆಚರಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
0
samarasasudhi
ನವೆಂಬರ್ 15, 2021
ತಿರುಪತಿ: ಬುಡಕಟ್ಟು ಸಮುದಾಯಗಳ ಗೌರವಾರ್ಥವಾಗಿ ಇನ್ನು ಮುಂದೆ ಪ್ರತಿ ವರ್ಷದ ನವೆಂಬರ್ 15 ಅನ್ನು 'ಜನಜಾತೀಯ (ಬುಡಕಟ್ಟು ಜನರ) ಗೌರವ ದಿನ' ಎಂದು ಆಚರಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ತಿರುಪತಿಯಲ್ಲಿ ಭಾನುವಾರ ನಡೆದ ದಕ್ಷಿಣ ವಲಯ ಪರಿಷತ್ ಸಭೆಯಲ್ಲಿ ಮಾತನಾಡಿರುವ ಅಮಿತ್ ಶಾ, 'ಭಾರತ ಸರ್ಕಾರವು ನವೆಂಬರ್ 15 ಅನ್ನು 'ಬುಡಕಟ್ಟು ಜನರ ಗೌರವ ದಿನ'ವಾಗಿ ಆಚರಿಸಲು ನಿರ್ಧರಿಸಿದೆ.
'ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಮತ್ತು ತಮ್ಮ ರಾಜ್ಯಗಳ ಅಭಿವೃದ್ಧಿಗೆ ಆದಿವಾಸಿಗಳು ನೀಡಿರುವ ಕೊಡುಗೆಯನ್ನು ಪ್ರದರ್ಶಿಸಲು ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಕ್ರಿಯಾ ಯೋಜನೆಯನ್ನು ರೂಪಿಸಬೇಕು,' ಎಂದೂ ಶಾ ಒತ್ತಾಯಿಸಿದರು.