ಚಂಡೀಗಡ: ಹರಿಯಾಣದಲ್ಲಿ ವಾಯು ಮಾಲಿನ್ಯ ಮಿತಿಮೀರಿದ್ದು, ಗಾಳಿಯ ಗುಣಮಟ್ಟ ಸುಧಾರಿಸುವ ಉದ್ದೇಶದಿಂದ ಎಲ್ಲಾ ಶಾಲೆಗಳು ಮತ್ತು ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ನಿಲ್ಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.
0
samarasasudhi
ನವೆಂಬರ್ 15, 2021
ಚಂಡೀಗಡ: ಹರಿಯಾಣದಲ್ಲಿ ವಾಯು ಮಾಲಿನ್ಯ ಮಿತಿಮೀರಿದ್ದು, ಗಾಳಿಯ ಗುಣಮಟ್ಟ ಸುಧಾರಿಸುವ ಉದ್ದೇಶದಿಂದ ಎಲ್ಲಾ ಶಾಲೆಗಳು ಮತ್ತು ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ನಿಲ್ಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಈ ಜಿಲ್ಲೆಗಳಲ್ಲಿ ನ.17 ರವರೆಗೆ ಶಾಲೆಗಳನ್ನು ಮುಚ್ಚುವುದು, ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ನಿರ್ಬಂಧಿಸುವುದು, ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಮಾಡುವಂತೆ ಸರ್ಕಾರ ಸಲಹೆ ನೀಡಿದೆ.
ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿಮೀರಿದ್ದು, ಗಾಳಿಯ ಗುಣಮಟ್ಟ ಸುಧಾರಿಸಲು ಅಗತ್ಯವಿದ್ದಲ್ಲಿ ನಗರದಲ್ಲಿ ಎರಡು ದಿನ ಲಾಕ್ಡೌನ್ ಘೋಷಿಸುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶನಿವಾರ ಸಲಹೆ ನೀಡಿತ್ತು.