ತಿರುವನಂತಪುರ: ಕೇರಳದಲ್ಲಿ ಇಂದು 3382 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರ್ನಾಕುಳಂ 666, ತಿರುವನಂತಪುರ 527, ಕೋಝಿಕ್ಕೋಡ್ 477, ಕೊಲ್ಲಂ 259, ತ್ರಿಶೂರ್ 237, ಕಣ್ಣೂರು 231, ಕೊಟ್ಟಾಯಂ 198, ಪಾಲಕ್ಕಾಡ್ 174, ಇಡುಕ್ಕಿ 122, ಆಲಪ್ಪುಳ 114, ಪಥನಂತಿಟ್ಟ 111, ಮಲಪ್ಪುರಂ 106, ವಯನಾಡ್ 82, ಕಾಸರಗೋಡು 78 ಎಂಬಂತೆ ಸೋಂಕು ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 44,638 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕಿನ ಜನಸಂಖ್ಯೆಯ ಅನುಪಾತ (WIPR) 10 ಕ್ಕಿಂತ ಹೆಚ್ಚಿನ 19 ಸ್ಥಳೀಯ ಸಂಸ್ಥೆಗಳಲ್ಲಿ 21 ವಾರ್ಡ್ ಗಳಿವೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 1,56,786 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 1,52,086 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 4,700 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಒಟ್ಟು 245 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ 44,487 ಕೋವಿಡ್ ಪ್ರಕರಣಗಳಲ್ಲಿ, ಕೇವಲ 7.7 ಶೇಕಡಾ ಜನರು ಮಾತ್ರ ಆಸ್ಪತ್ರೆಗಳು / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 59 ಮಂದಿ ಮೃತಪಟ್ಟಿದ್ದಾರೆ. ಇದಲ್ಲದೆ, ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ 58 ಸಾವುಗಳು ವರದಿಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 39,955ಕ್ಕೆ ಏರಿಕೆಯಾಗಿದೆ. ಇಂದು ಸೋಂಕು ಪತ್ತೆಯಾದವರಲ್ಲಿ 8 ಮಂದಿ ಹೊರ ರಾಜ್ಯದವರು. 3103 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 241 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಮೂವತ್ತು ಮಂದೊ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢಪಡಿಸಲಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 5779 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 814,ಢ ಕೊಲ್ಲಂ 289, ಪತ್ತನಂತಿಟ್ಟ 7, ಆಲಪ್ಪುಳ 306, ಕೊಟ್ಟಾಯಂ 584, ಇಡುಕ್ಕಿ 262, ಎರ್ನಾಕುಳಂ 946, ತ್ರಿಶೂರ್ 632, ಪಾಲಕ್ಕಾಡ್ 253, ಮಲಪ್ಪುರಂ 293, ಕೋಝಿಕ್ಕೋಡ್ 693, ವಯನಾಡ್ 268, ಕಣ್ಣೂರು 367, ಕಾಸರಗೋಡು 65 ಎಂಬಂತೆ ಗುಣಮುಖರಾಗಿದ್ದಾರೆ.




