ತಿರುವನಂತಪುರ: ರಾಜ್ಯದಲ್ಲಿ ಇಂದು 3698 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋಝಿಕ್ಕೋಡ್ 724, ಎರ್ನಾಕುಳಂ 622, ತಿರುವನಂತಪುರ 465, ಕೊಲ್ಲಂ 348, ತ್ರಿಶೂರ್ 247, ಕೊಟ್ಟಾಯಂ 228, ಕಣ್ಣೂರು 200, ಮಲಪ್ಪುರಂ 179, ಇಡುಕ್ಕಿ 162, ಆಲಪ್ಪುಳ 151, ವಯನಾಡ್ 119, ಪಾಲಕ್ಕಾಡ್ 115, ಪತ್ತನಂತಿಟ್ಟ 119, ಕಾಸರಗೋಡು 28 ಎಂಬಂತೆ ಸೋಂಕು ಬಾಧಿಸಿದೆ.
ಕಳೆದ 24 ಗಂಟೆಗಳಲ್ಲಿ 45,190 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕಿನ ಜನಸಂಖ್ಯೆಯ ಅನುಪಾತ (WIPR) 10 ಕ್ಕಿಂತ ಹೆಚ್ಚಿನ 39 ಸ್ಥಳೀಯಾಡಳಿತ ಪ್ರದೇಶಗಳಲ್ಲಿ 46 ವಾರ್ಡ್ಗಳಿವೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ ಮಂದಿ 1,88,979 ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 1,83,929 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 5,050 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. 333 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಸ್ತುತ 54,091 ಕೊರೋನ ಪ್ರಕರಣಗಳಲ್ಲಿ, ಕೇವಲ 7.2 ಪ್ರತಿಶತದಷ್ಟು ಜನರು ಆಸ್ಪತ್ರೆಗಳು / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 75 ಮಂದಿ ಮೃತರಾಗಿದ್ದಾರೆ. ಇದಲ್ಲದೆ, ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ 105 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 37,675ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 15 ಮಂದಿ ಹೊರ ರಾಜ್ಯದವರು. 3432 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 238 ಮಂದಿಯ ಸಂಪರ್ಕ ಮೂಲಗಳು ಸ್ಪಷ್ಟವಾಗಿಲ್ಲ. ಇಂದು ಹದಿಮೂರು ಮಂದಿ ಆರೋಗ್ಯ ಕಾರ್ಯಕರ್ತರಾಗಿ ಕೋವಿಡ್ ದೃಢಪಡಿಸಲಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 7515 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 1305, ಕೊಲ್ಲಂ 469, ಪತ್ತನಂತಿಟ್ಟ 401, ಆಲಪ್ಪುಳ 176, ಕೊಟ್ಟಾಯಂ 816, ಇಡುಕ್ಕಿ 524, ಎರ್ನಾಕುಳಂ 963, ತ್ರಿಶೂರ್ 858, ಪಾಲಕ್ಕಾಡ್ 285, ಮಲಪ್ಪುರಂ 335, ಕೋಝಿಕೋಡ್ 667, ವಯನಾಡ್ 253, ಕಣ್ಣೂರು 431, ಕಾಸರಗೋಡು 32 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 54,091 ಮಂದಿ ಜನರಿಗೆ ಕೋವಿಡ್ ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 50,12,301 ಮಂದಿ ಜನರು ಕೊರೋನಾದಿಂದ ಮುಕ್ತರಾಗಿದ್ದಾರೆ.




