ತಿರುವನಂತಪುರ: ರಾಜ್ಯದಲ್ಲಿ ಇಂದು 4280 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ತಿರುವನಂತಪುರ 838, ಎರ್ನಾಕುಳಂ 825, ತ್ರಿಶೂರ್ 428, ಕೋಝಿಕ್ಕೋಡ್ 387, ಕೊಟ್ಟಾಯಂ 327, ಕೊಲ್ಲಂ 286, ವಯನಾಡ್ 209, ಪಾಲಕ್ಕಾಡ್ 203, ಕಣ್ಣೂರು 194, ಪತ್ತನಂತಿಟ್ಟ 167, ಇಡುಕ್ಕಿ 144, ಅಲಪ್ಪುಳ 137, ಮಲಪ್ಪುರಂ 101, ಕಾಸರಗೋಡು 34 ಎಂಬಂತೆ ಕೋವಿಡ್ ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 48,916 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕಿನ ಜನಸಂಖ್ಯೆಯ ಅನುಪಾತ 10 ಕ್ಕಿಂತ ಹೆಚ್ಚಿನ 39 ಸ್ಥಳೀಯಾಡಳಿತ ಪ್ರದೇಶಗಳಲ್ಲಿ 46 ವಾರ್ಡ್ ಗಳಿವೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 1,80,316 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 1,75,361 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 4,955 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಒಟ್ಟು 305 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಸ್ತುತ, 51,302 ಕೊರೋನಾ ಪ್ರಕರಣಗಳಲ್ಲಿ, ಕೇವಲ 7.3 ಶೇಕಡ ಜನರು ಮಾತ್ರ ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 35 ಮಂದಿ ಮೃತಪಟ್ಟಿದ್ದಾರೆ. ಇದಲ್ಲದೆ, ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ 273 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 38,353ಕ್ಕೆ ಏರಿಕೆಯಾಗಿದೆ.
ಇಂದು ಕೋವಿಡ್ ಪತ್ತೆಯಾದವರಲ್ಲಿ 27 ಮಂದಿ ಹೊರ ರಾಜ್ಯದವರು. 3956 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 274 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು 23 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಪತ್ತೆಯಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 5379 ಮಂದಿ ಜನರು ಗುಣಮುಖರಾಗಿದ್ದಾರೆ.ತಿರುವನಂತಪುರ 624, ಕೊಲ್ಲಂ 372, ಪತ್ತನಂತಿಟ್ಟ 377, ಆಲಪ್ಪುಳ 277, ಕೊಟ್ಟಾಯಂ 235, ಇಡುಕ್ಕಿ 242, ಎರ್ನಾಕುಲಂ 656, ತ್ರಿಶೂರ್ 764, ಪಾಲಕ್ಕಾಡ್ 264, ಮಲಪ್ಪುರಂ 263, ಕೋಝಿಕ್ಕೋಡ್ 683, ವಯನಾಡ್ 179, ಕಣ್ಣೂರು 371, ಕಾಸರಗೋಡು 72 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 51,302 ಮಂದಿ ಜನರಿಗೆ ಕೋವಿಡ್ ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 50,23,658 ಮಂದಿ ಕೊರೊನಾದಿಂದ ಮುಕ್ತರಾಗಿದ್ದಾರೆ.




