ತಿರುವನಂತಪುರ: ರಾಜ್ಯದಲ್ಲಿ ಇಂದು 4547 ಮಂದಿ ಜನರಿಗೆ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ತಿರುವನಂತಪುರ 709, ಎರ್ನಾಕುಳಂ 616, ಕೋಝಿಕ್ಕೋಡ್ 568, ತ್ರಿಶೂರ್ 484, ಕೊಲ್ಲಂ 474, ಕಣ್ಣೂರು 371, ಕೊಟ್ಟಾಯಂ 226, ಇಡುಕ್ಕಿ 203, ಪಾಲಕ್ಕಾಡ್ 176, ಪತ್ತನಂತಿಟ್ಟ 175, ಆಲಪ್ಪುಳ 172, ವಯನಾಡ್ 168, ಮಲಪ್ಪುರ 159,ಕಾಸರಗೋಡು 46 ಎಂಬಂತೆ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 50,638 ಮಾದರಿಗಳನ್ನು ಪರೀಕ್ಷಿಸಲಾಗಿದೆ. 39 ಸ್ಥಳೀಯ ಸಂಸ್ಥೆಗಳ 46 ವಾರ್ಡ್ಗಳಲ್ಲಿ ವಾರದ ಸೋಂಕಿನ ಜನಸಂಖ್ಯೆಯ ಅನುಪಾತವು ಹತ್ತಕ್ಕಿಂತ ಹೆಚ್ಚಿದೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 2,22,466 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 2,17,083 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 5,383 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಒಟ್ಟು 325 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ, 64,738 ಕೊರೋನಾ ಪ್ರಕರಣಗಳಲ್ಲಿ, ಕೇವಲ 7% ವ್ಯಕ್ತಿಗಳು ಮಾತ್ರ ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.ಅ
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 57 ಮಂದಿ ಮೃತರಾಗಿದ್ದಾರೆ. ಇದಲ್ಲದೆ, ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ 70 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 35,877ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 12 ಮಂದಿ ಹೊರ ರಾಜ್ಯದವರು. 4234 ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 274 ಮಂದಿಯ ಸಂಪರ್ಕ ಮೂಲವು ಸ್ಪಷ್ಟವಾಗಿಲ್ಲ. ಇಪ್ಪತ್ತೇಳು ಆರೋಗ್ಯ ಕಾರ್ಯಕರ್ತರಿಗೆ ಸೋಂಕು ದೃಢಪಟ್ಟಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 6866 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 959, ಕೊಲ್ಲಂ 439, ಪತ್ತನಂತಿಟ್ಟ 18, ಆಲಪ್ಪುಳ 338, ಕೊಟ್ಟಾಯಂ 487, ಇಡುಕ್ಕಿ 476, ಎರ್ನಾಕುಲಂ 1134, ತ್ರಿಶೂರ್ 781, ಪಾಲಕ್ಕಾಡ್ 284, ಮಲಪ್ಪುರಂ 377, ಕೋಝಿಕ್ಕೋಡ್ 792, ವಯನಾಡ್ 286, ಕಣ್ಣೂರು 394, ಕಾಸರಗೋಡು 101 ಎಂಬಂತೆ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ 64,738 ಮಂದಿಗೆ ಸೋಂಕು ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 49,64,375 ಮಂದಿ ಜನರು ಕೊರೋನಾದಿಂದ ಮುಕ್ತರಾಗಿದ್ದಾರೆ.

