ತಿರುವನಂತಪುರ: ರಾಜ್ಯದಲ್ಲಿ ಇಂದು 6111 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ತಿರುವನಂತಪುರ 848, ಎರ್ನಾಕುಳಂ 812, ಕೋಝಿಕ್ಕೋಡ್ 757, ತ್ರಿಶೂರ್ 591, ಕೊಟ್ಟಾಯಂ 570, ಕೊಲ್ಲಂ 531, ಕಣ್ಣೂರು 348, ವಯನಾಡ್ 289, ಮಲಪ್ಪುರಂ 287, ಇಡುಕ್ಕಿ 274, ಪಾಲಕ್ಕಾಡ್ 269, ಪತ್ತನಂತಿಟ್ಟ 253, ಆಲಪ್ಪುಳ. 185, ಕಾಸರಗೋಡು 97 ಎಂಬಂತೆ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 66,693 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕಿನ ಜನಸಂಖ್ಯೆಯ ಅನುಪಾತ (WIPR) 10 ಕ್ಕಿಂತ ಹೆಚ್ಚಿನ 39 ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ 46 ವಾರ್ಡ್ಗಳಿವೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 2,05,822 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 2,00,635 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 5,187 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಒಟ್ಟು 322 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ 62,288 ಕೊರೋನಾ ಪ್ರಕರಣಗಳಲ್ಲಿ, ಕೇವಲ 6.8 ಪ್ರತಿಶತದಷ್ಟು ಜನರು ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 51 ಮಂದಿ ಮೃತರಾಗಿದ್ದಾರೆ. ಇದಲ್ಲದೆ, ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ 321 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 36,847ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 22 ಮಂದಿ ಹೊರ ರಾಜ್ಯದವರು. 5664 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 392 ಮಂದಿಯ ಸಂಪರ್ಕ ಮೂಲವು ಸ್ಪಷ್ಟವಾಗಿಲ್ಲ. ಮೂವತ್ಮೂರು ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢಪಟ್ಟಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 7202 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 830, ಕೊಲ್ಲಂ 944, ಪತ್ತನಂತಿಟ್ಟ 357, ಆಲಪ್ಪುಳ 318, ಕೊಟ್ಟಾಯಂ 365, ಇಡುಕ್ಕಿ 386, ಎರ್ನಾಕುಲಂ 913, ತ್ರಿಶೂರ್ 612, ಪಾಲಕ್ಕಾಡ್ 340, ಮಲಪ್ಪುರಂ 323, ಕೋಝಿಕ್ಕೋಡ್ 928, ವಯನಾಡ್ 315, ಕಣ್ಣೂರು 481, ಕಾಸರಗೋಡು 90 ಎಂಬಂತೆ ಗುಣಮುಖರಾಗಿದ್ದಾರೆ.




