HEALTH TIPS

ಮಂಗಳೂರು-ಚೆನ್ನೈ ರೈಲಿಗೆ ಸಿಲುಕಿ ಹೆಣ್ಣಾನೆ, ಎರಡು ಮರಿಯಾನೆ ದುರಂತ ಸಾವು!

             ಚೆನ್ನೈ: 25 ವರ್ಷದ ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು-ಚೆನ್ನೈ ಎಕ್ಸಪ್ರೆಸ್‌ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

           ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಭವಿಸಿದಾಗ ರೈಲು ಅತಿ ವೇಗವಾಗಿ ಚಲಿಸುತ್ತಿತ್ತು, ಡಿಕ್ಕಿ ರಭಸಕ್ಕೆ ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ. ಸ್ಥಳಕ್ಕೆ ಕಾರ್ಯಾಚರಣೆ ತಂಡ ತೆರಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

               ಮಂಗಳೂರು-ಚೆನ್ನೈ ಎಕ್ಸಪ್ರೆಸ್‌ ರೈಲು ಕೇರಳದ ಕೋಯಿಕ್ಕೋಡ್ ಹಾಗೂ ಪಾಲಕ್ಕಾಡ್ ಮಾರ್ಗವಾಗಿ ಚೆನ್ನೈಗೆ ತೆರಳುತ್ತದೆ.

           ಕೊಯಮತ್ತೂರು ಬಳಿ ಇತ್ತೀಚೆಗೆ ಆನೆಗಳ ಅಸಹಜ ಸಾವು ಹೆಚ್ಚುತ್ತಿದ್ದು ಇದು ಪರಿಸರ ಹಾಗೂ ಪ್ರಾಣಿ ಪ್ರಿಯರಲ್ಲಿ ಆತಂಕ ಮೂಡಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries