HEALTH TIPS

ದಕ್ಷಿಣ ಕನ್ನಡ- ಕಾಸರಗೋಡು ಬಸ್ ಸಂಚಾರದಲ್ಲಿ ವ್ಯತ್ಯಯವಿಲ್ಲ-ದ.ಕ. ಜಿಲ್ಲಾಧಿಕಾರಿ ಸ್ಪಷ್ಟನೆ

          ಮಂಗಳೂರು: ಕೋವಿಡ್ ನ ಹೊಸ ರೂಪಾಂತರಿ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಗಡಿಗಳಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ವಿಧಿಸಲಾಗಿದೆ. ಆರ್ ಟಿಪಿಸಿಆರ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಈ ನಡುವೆ ಇತ್ತೀಚಿಗಷ್ಟೇ ಆರಂಭಗೊಂಡಿರುವ ಕಾಸರಗೊಡು-ಮಂಗಳೂರು ಬಸ್ ಸಂಚಾರ ಮುಂದುವರೆಸಲಾಗುವುದೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
       ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಕೇರಳ-ಕರ್ನಾಟಕ ಬಸ್ ಸಂಚಾರದಲ್ಲಿ ಸದ್ಯ ಯಾವುದೇ ಬದಲಾವಣೆ ಇಲ್ಲ. ಕೇರಳ-ಕರ್ನಾಟಕ ನಡುವೆ ಬಸ್ ಸಂಚಾರ ಮುಂದುವರೆಯಲಿದೆ. ಆದರೆ, ಪ್ರಯಾಣದ ಸಂದರ್ಭದಲ್ಲಿ ಆರ್‍ ಟಿಪಿಸಿಆರ್ ಕಡ್ಡಾಯಗೊಳಿಸಲಾಗಿದೆ. ಬಸ್ ಹತ್ತುವ ಸಂದರ್ಭದಲ್ಲೇ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಈ ಬಗ್ಗೆ ಇಲಾಖೆಯಿಂದಲೂ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
       ಈ ಬಗ್ಗೆ  ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ತಲಪಾಡಿ ಸೇರಿದಂತೆ ಎಲ್ಲಾ ಗಡಿಗಳಲ್ಲಿ ತಪಾಸಣೆ ಆರಂಭಗೊಂಡಿದೆ. ಸೋಮವಾರದಿಂದ ಇತರ ಇಲಾಖೆಗಳ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಸೋಮವಾರದಿಂದ ಆಗಮಿಸುವವರು ಆರ್ ಟಿಪಿಸಿಆರ್ ವರದಿ ಹೊಂದಿರಬೇಕು. ನಿತ್ಯ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ದ.ಕ. ಜಿಲ್ಲಾಡಳಿತದ ವತಿಯಿಂದ ನಿತ್ಯಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಪರೀಕ್ಷೆಗೂ ಅವಕಾಶ ಕಲ್ಪಿಸಲಾಗಿದೆ ಎಂದರು.
         ಈಗಾಗಲೇ ಜಿಲ್ಲೆಗೆ ಆಗಮಿಸಿದ ಕೇರಳ ವಿದ್ಯಾರ್ಥಿಗಳ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಅಲ್ಲದೆ, ಎಲ್ಲಾ ಕ್ಯಾಂಪಸ್, ಕಾಲೇಜಿಗಳ ವಿದ್ಯಾರ್ಥಿಗಳ ಸ್ಕ್ರೀನಿಂಗ್ ಗೆ ಸೂಚನೆ ನೀಡಲಾಗಿದೆ. ದ.ಕ. ಜಿಲ್ಲೆಯ ಬಹುತೇಕ ಪ್ರದೇಶಗಳು ಗಡಿ ಪ್ರದೇಶಗಳಾಗಿವೆ. ದ.ಕ.-ಕಾಸರಗೋಡು ನಡುವೆ ಅವಿನೋಭಾವ ಸಂಬಂಧವಿದ್ದು, ಜನರಿಗೆ ತೊಂದರೆಯಾಗದಂತೆ, ಸಮಸ್ಯೆಗಳಾಗದಂತೆ ನಿರ್ವಹಣೆ ಮಾಡಬೇಕು. ಕಾಸರಗೋಡಿನ ಹೆಚ್ಚಿನ ಜನರು ಮಂಗಳೂರು ಅವಲಂಬಿಸಿದ್ದಾರೆ. ಜನರಿಗೆ ತೊಂದರೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಲಾಗುವುದು. ನಿತ್ಯ ಪ್ರಯಾಣಿಸುವವರ ವಿಚಾರ ನಮಗೆ ಮುಖ್ಯವಾಗಿದೆ. ಸೌತ್ ಆಫ್ರಿಕಾದಿಂದ ಬಂದವರ ತಪಾಸಣೆಗೂ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries