HEALTH TIPS

ಜಾಮೀನು ಆದೇಶ ವಿಳಂಬದಿಂದ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ನ್ಯಾ. ಚಂದ್ರಚೂಡ್‌

                  ನವದೆಹಲಿ: ಜಾಮೀನಿಗೆ ಸಂಬಂಧಪಟ್ಟ ಆದೇಶಗಳನ್ನು ಜೈಲು ಅಧಿಕಾರಿಗಳಿಗೆ ತಲುಪಿಸುವಲ್ಲಿನ ವಿಳಂಬ ನ್ಯಾಯ ವ್ಯವಸ್ಥೆಯಲ್ಲಿನ 'ಗಂಭೀರ ನ್ಯೂನತೆ' ಎಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಹೇಳಿದರು.

           'ಜಾಮೀನು ಆದೇಶಗಳು ಜೈಲು ಅಧಿಕಾರಿಗಳಿಗೆ ತಲುಪುವಲ್ಲಾಗುವ ವಿಳಂಬ, ಪ್ರತಿಯೊಬ್ಬ ವಿಚಾರಣಾಧೀನ ಕೈದಿಯ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತದೆ.

ಹೀಗಾಗಿ ಈ ನ್ಯೂನತೆಯನ್ನು ಸರಿಪಡಿಸುವ ಕಾರ್ಯ ಸಮರೋಪಾದಿಯಲ್ಲಿ ನಡೆಯಬೇಕಿದೆ' ಎಂದು ಅವರು ಪ್ರತಿಪಾದಿಸಿದರು.

           ಅಲಹಾಬಾದ್‌ ಹೈಕೋರ್ಟ್‌ ಆಯೋಜಿಸಿದ್ದ 'ವರ್ಚುವಲ್ ಕೋರ್ಟ್‌'ಗಳು ಹಾಗೂ ಕಕ್ಷಿದಾರರಿಗೆ ಆನ್‌ಲೈನ್‌ ಮೂಲಕ ಕಾನೂನು ಸೇವೆಗಳನ್ನು ಒದಗಿಸುವ 'ಇ-ಸೇವಾ ಕೇಂದ್ರಗಳ' ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

             'ಜಾಮೀನು ಆದೇಶಗಳು ಸಕಾಲದಲ್ಲಿ ಜೈಲುಗಳಿಗೆ ತಲುಪದೇ ಇರುವುದು ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿನ ದೊಡ್ಡ ಕೊರತೆ. ವಿಚಾರಣಾಧೀನ ಕೈದಿಗಳದ್ದು ಮಾತ್ರವಲ್ಲ, ಶಿಕ್ಷೆ ಅಮಾನತುಗೊಂಡಿರುವ ಅಪರಾಧಿಯ ಸ್ವಾತಂತ್ರ್ಯಕ್ಕೂ ಇದರಿಂದ ಧಕ್ಕೆ ಉಂಟಾಗುವುದು' ಎಂದು ಅವರು ಹೇಳಿದರು.

                ಈ ನ್ಯೂನತೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ 'ಇ-ಕಸ್ಟಡಿ ಸರ್ಟಿಫಿಕೇಟ್‌' ನೀಡಲು ಒಡಿಶಾ ಹೈಕೋರ್ಟ್‌ ಜಾರಿಗೊಳಿಸಿದ ಕ್ರಮವನ್ನು ನ್ಯಾಯಮೂರ್ತಿ ಚಂದ್ರಚೂಡ್‌ ಅವರು ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಿದರು.

          ಈ ಹಿಂದೆ ಹಲವು ಸಂದರ್ಭಗಳಲ್ಲಿ ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಸಹ ಈ ವಿಷಯವನ್ನು ಪ್ರಸ್ತಾಪಿಸಿದ್ದರು.

           ಜಾಮೀನು ಆದೇಶಗಳು ತ್ವರಿತವಾಗಿ ಜೈಲುಗಳಿಗೆ ತಲುಪಿಸುವ ಸಲುವಾಗಿ 'ಎಲೆಕ್ಟ್ರಾನಿಕ್‌ ದಾಖಲೆಗಳ ತ್ವರಿತ ಮತ್ತು ಸುರಕ್ಷಿತ ರವಾನೆ' (FASTER) ಎಂಬ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್‌ ಆದೇಶಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries