ಕಣ್ಣೂರು: ಕಣ್ಣೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಗೋಪಿನಾಥ್ ರವೀಂದ್ರನ್ ಅವರ ಮರುನೇಮಕವನ್ನು ವಿರೋಧಿಸಿ ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಯುವ ಮೋರ್ಚಾ ಕಾರ್ಯಕರ್ತರು ವಿಶ್ವವಿದ್ಯಾನಿಲಯಕ್ಕೆ ನುಗ್ಗಿ ಕಪ್ಪು ಬಾವುಟ ಪ್ರದರ್ಶಿಸಿದರು.
ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಕೆ.ಕೆ.ರಾಗೇಶ್ ಅವರ ಪತ್ನಿ ಪ್ರಿಯಾ ವರ್ಗೀಸ್ ಅವರನ್ನು ಹಿಂಬಾಗಿಲಿಗೆ ನೇಮಿಸಿರುವ ಗೋಪಿನಾಥ್ ರವೀಂದ್ರನ್ ಅವರನ್ನೇ ಮರು ನೇಮಕಾತಿ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆದಿದೆ. ಘಟನೆಯಲ್ಲಿ ಸರ್ಕಾರವು ವಿಶ್ವವಿದ್ಯಾಲಯದ ನಿಯಮಗಳನ್ನು ಉಲ್ಲಂಘಿಸಿ ಉಪಕುಲಪತಿ ಗೋಪಿನಾಥ್ ರವೀಂದ್ರನ್ ಅವರನ್ನು ಮರುನೇಮಕ ಮಾಡಿತ್ತು. ಈ ಹಿನ್ನೆಲೆಯಲ್ಲಿ ಯುವಮೋರ್ಚಾ ಕಾರ್ಯಕರ್ತರು ವಿಶ್ವವಿದ್ಯಾಲಯಕ್ಕೆ ಬಂದು ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅರುಣ್ ಕೈತಪ್ರಮ್, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರ್ಜುನ್ ಮಾವಿಲಕಂಡಿ, ಕೆ.ರಂಜಿತ್, ಜಿಲ್ಲಾ ಕಾರ್ಯದರ್ಶಿ ಅರ್ಜುನ್ ಕೆ.ವಿ., ಅಕ್ಷಯ್ ಕೃಷ್ಣ, ಅಭಿರಾಮ್ ಕೆ ಅವರನ್ನು ಪೋಲೀಸರು ಬಂಧಿಸಿದ್ದಾರೆ.
ಪ್ರಿಯಾ ವರ್ಗೀಸ್ ಅವರನ್ನು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ನೇಮಿಸಿದ ಕ್ರಮಕ್ಕೆ ಸಂಬಂಧಿಸಿದಂತೆ ಕುಲಪತಿಯೂ ಆಗಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿವಾದದಲ್ಲಿ ಸಿಲುಕಿರುವರು. ಗೋಪಿನಾಥ್ ರವೀಂದ್ರನ್ ಅವರಿಂದ ರಾಜ್ಯಪಾಲರು ವಿವರಣೆ ಕೇಳಿರುವರು. ನೇಮಕಾತಿ ಕುರಿತು ವಿವರವಾದ ವರದಿ ನೀಡುವಂತೆ ರಾಜ್ಯಪಾಲರು ತಿಳಿಸಿದ್ದಾರೆ. ಏತನ್ಮಧ್ಯೆ, ನೇಮಕಾತಿ ವಿವಾದದ ನಡುವೆ, ಕಣ್ಣೂರು ವಿಸಿ ಗೋಪಿನಾಥ್ ರವೀಂದ್ರನ್ ಅವರ ಮರುನೇಮಕಕ್ಕೆ ಸರ್ಕಾರ ಶಿಫಾರಸು ಮಾಡಿದೆ. ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯ ಪತ್ನಿಯನ್ನೇ ನೇಮಕ ಮಾಡಿರುವ ಆರೋಪ ಕೇಳಿಬಂದಾಗ ಮರುನೇಮಕಾತಿಗೆ ಸರ್ಕಾರ ಮಾಡಿದ್ದ ಶಿಫಾರಸ್ಸಿಗೂ ರಾಜ್ಯಪಾಲರು ಅನುಮೋದನೆ ನೀಡಿದ್ದರು.