HEALTH TIPS

ಮೋದಿಗೆ ದೇಶ ಮೊದಲು, ಚುನಾವಣೆಗೆ ಕೃಷಿ ಕಾಯ್ದೆ ರದ್ದುಗೊಳಿಸಿಲ್ಲ: ಸಾಕ್ಷಿ ಮಹಾರಾಜ್

               ಲಖನೌ: ಚುನಾವಣೆ ಉದ್ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿಲ್ಲ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.

               'ಕಾಯ್ದೆಗಳಿಗೆ ಚುನಾವಣೆಗಳೊಂದಿಗೆ ಯಾವುದೇ ಸಂಬಂಧವಿಲ್ಲ.


                 ಮೋದಿಯವರಿಗೆ ದೇಶವೇ ಮೊದಲು. ಕಾಯ್ದೆಗಳು ಬರಬಹುದು, ರದ್ದುಗೊಳಿಸಬಹುದು, ಮರು ರೂಪಿಸಬಹುದು. ಕಾಯ್ದೆಗಳಿಗಿಂತಲೂ ದೇಶವನ್ನೇ ಮೊದಲ ಆಯ್ಕೆಯನ್ನಾಗಿ ಮಾಡಿ ತಪ್ಪು ಉದ್ದೇಶಗಳಿಗೆ ಹೊಡೆತ ನೀಡಿದ್ದಕ್ಕಾಗಿ ಪ್ರಧಾನಿಯವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ' ಎಂದು ಅವರು ಹೇಳಿದ್ದಾರೆ.

                  ಸಾಕ್ಷಿ ಮಹಾರಾಜ್ ಹೇಳಿಕೆಯುಳ್ಳ ವಿಡಿಯೊವನ್ನು 'ಎಎನ್‌ಐ' ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

              ಕೇಂದ್ರವು ಕಳೆದ ವರ್ಷ ರೂಪಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ರೈತರ ಭಾರಿ ವಿರೋಧದ ಕಾರಣ ರದ್ದುಪಡಿಸುವುದಾಗಿ ಮೋದಿ ಅವರು ಶುಕ್ರವಾರ ಘೋಷಿಸಿದ್ದರು. ಕಾಯ್ದೆಗಳ ಬಗ್ಗೆ ಒಂದು ವರ್ಗದ ರೈತರಿಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿರುವುದಕ್ಕೆ ದೇಶದ ಜನತೆ ಬಳಿ ಕ್ಷಮೆಯನ್ನೂ ಯಾಚಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries