HEALTH TIPS

ಇಂದಿನಿಂದ ತಮಿಳುನಾಡಿಗೆ ಕೆ.ಎಸ್.ಆರ್.ಟಿ.ಸಿ ಸೇವೆಗಳು ಆರಂಭ

                    ತಿರುವನಂತಪುರ; ಇಂದಿನಿಂದ ತಮಿಳುನಾಡಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಆರಂಭವಾಗಿದೆ. ಕೇರಳಕ್ಕೆ ಬಸ್ ಸೇವೆಯನ್ನು ಪುನರಾರಂಭಿಸಲು ತಮಿಳುನಾಡು ಸರ್ಕಾರವು ಅನುಮೋದನೆ ನೀಡಿದ ಬಳಿಕ  ಡಿಸೆಂಬರ್ 1 ರಿಂದ ತಮಿಳುನಾಡಿಗೆ ಸೇವೆ ಪ್ರಾರಂಭವಾಯಿತು. ಕೊರೋನಾ ವಿಸ್ತರಣೆಯ ಹಿನ್ನೆಲೆಯಲ್ಲಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. 

               ಕೊರೋನಾ ಪರಿಸ್ಥಿತಿಯಲ್ಲಿ, ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ನಡುವೆ  ಕರ್ನಾಟಕಕ್ಕೆ ಸೇವೆಗಳನ್ನು ಅನುಮತಿಸಲಾಯಿತು, ಆದರೆ ತಮಿಳುನಾಡು ಇನ್ನೂ ಅನುಮತಿ ನೀಡಿರಲಿಲ್ಲ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮಿಳುನಾಡು ಮುಖ್ಯಮಂತ್ರಿಗೆ ಈ ಬಗ್ಗೆ ಪತ್ರ ಕಳುಹಿಸಿದ್ದರು. ಶಬರಿಮಲೆ ಯಾತ್ರೆಗೆ ಸಂಬಂಧಿಸಿದಂತೆ ಸಾಮಾನ್ಯ ಜನರು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಬಸ್ ಸಂಚಾರ ಪುನರಾರಂಭಕ್ಕೆ ದಾರಿ ಮಾಡಿಕೊಡಲು ಕೇರಳ ಬಯಸಿತ್ತು. ಈ ಹಿನ್ನೆಲೆಯಲ್ಲಿ ತಮಿಳುನಾಡು ಬಸ್ ಸಂಚಾರಕ್ಕೆ ಇದ್ದ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ.

              ತಮಿಳುನಾಡು ಸಾರಿಗೆ ಸಚಿವರ ಜೊತೆ ಮಾತುಕತೆ ನಡೆಸಲು ಸಾರಿಗೆ ಸಚಿವ ಆಂಟನಿ ರಾಜು ಅವರಿಗೆ ತಮಿಳುನಾಡು ಸರ್ಕಾರ ಅನುಮತಿ ನೀಡಿದೆ. ಇದರೊಂದಿಗೆ ಕೇರಳ-ತಮಿಳುನಾಡು ಸೇವೆಗಳು ಪುನರಾರಂಭಗೊಂಡಿತು. ಈ ಮಧ್ಯೆ, ತಮಿಳುನಾಡಿನಲ್ಲಿ ಕೊರೊನಾ ನಿಬರ್ಂಧಗಳನ್ನು ಮತ್ತೆ ವಿಸ್ತರಿಸಲಾಗಿದೆ. ನಿರ್ಬಂಧಗಳನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries