HEALTH TIPS

ಚಿನ್ನ ಕಳ್ಳಸಾಗಣೆ ಪ್ರಕರಣ: ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಹಾಗೂ ಇತರರಿಗೆ ಜಾಮೀನು ನೀಡಿದ ಹೈಕೋರ್ಟ್

                                                           

                      ಕೊಚ್ಚಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸ್ವಪ್ನಾ ಸುರೇಶ್‍ಗೆ ಜಾಮೀನು ನೀಡಲಾಗಿದೆ. ಚಿನ್ನ ಕಳ್ಳಸಾಗಣೆಯಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದ ಜಲಾಲ್ ಸೇರಿದಂತೆ ಏಳು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಚಿನ್ನ ಕಳ್ಳಸಾಗಣೆ ಸಂಬಂಧ ಎನ್ ಐಎ ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ಮಂಜೂರಾಗಿದೆ. ಈ ಹಿಂದೆ ಸ್ವಪ್ನಾ ಸುರೇಶ್  ಕೊಫೆಪೆÇೀಸಾ ಮೀಸಲು ಬಂಧನವನ್ನು ಹೈಕೋರ್ಟ್ ರದ್ದುಗೊಳಿಸಿತ್ತು.

              ಸ್ವಪ್ನಾ ಜೊತೆಗೆ ಮೊಹಮ್ಮದ್ ಶಫಿ, ಜಲಾಲ್, ರಾಬಿನ್ಸ್, ರಮೀಜ್ ಕೆಟಿ, ಶರಫುದ್ದೀನ್, ಸರಿತ್ ಮತ್ತು ಮೊಹಮ್ಮದ್ ಅಲಿ ಅವರಿಗೆ ಜಾಮೀನು ನೀಡಲಾಗಿದೆ. ಆದರೆ ಸ್ವಪ್ನಾ ಸುರೇಶ್ ಮಾತ್ರ ಜೈಲಿನಿಂದ ವಿಮೋಚಿತರಾಗುವರು. ಈ ಹಿಂದೆ ಇಡಿ ಪ್ರಕರಣ ಮತ್ತು ಕಸ್ಟಮ್ಸ್ ಪ್ರಕರಣದಲ್ಲಿ ಜಾಮೀನು ಪಡೆದಿದ್ದರು. ಎನ್ ಐಎ ಪ್ರಕರಣದಲ್ಲಿ ಮಾತ್ರ ಜಾಮೀನು ಕೋರಲಾಗಿತ್ತು.

                  ಆರೋಪಿಗಳಿಗೆ 25 ಲಕ್ಷ ರೂಪಾಯಿ ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ನ್ಯಾಯಮೂರ್ತಿ ವಿನೋದ್ ಚಂದ್ರನ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಇಂದು ಅಥವಾ ನಾಳೆ ಸ್ವಪ್ನಾ ಸುರೇಶ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜಾಮೀನು ನಿರಾಕರಿಸಿದ ಎನ್‍ಐಎ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

                    ಯುಎಪಿಎ ಪ್ರಕರಣ ಸಾಧುವಲ್ಲ ಮತ್ತು ಸ್ವಪ್ನಾ ಮತ್ತು ಸರಿತ್ ಸೇರಿದಂತೆ ಆರೋಪಿಗಳು ತನಿಖಾ ತಂಡಕ್ಕೆ ಎಪಿಎ ವಿಧಿಸಲು ಸಾಕಷ್ಟು ಪುರಾವೆಗಳು ಸಿಗಲಿಲ್ಲ ಎಂದು ಪ್ರತಿಪಾದಿಸಿದರು. ಆರೋಪಿಗಳ ವಿರುದ್ಧ ನಿಖರವಾದ ಸಾಕ್ಷ್ಯಾಧಾರಗಳಿವೆ ಎಂದು ಎನ್‍ಐಎ ನ್ಯಾಯಾಲಯಕ್ಕೆ ತಿಳಿಸಿದೆ. ಆದರೆ, ಸ್ವಪ್ನಾ ಸೇರಿದಂತೆ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries