HEALTH TIPS

ಶ್ರೀನಗರ: ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರ ದಾಳಿ, 14 ಮಂದಿಗೆ ಗಾಯ

             ಶ್ರೀನಗರ: ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಪೊಲೀಸ್ ಸಿಬ್ಬಂದಿ ಬಸ್ ಮೇಲೆ ಉಗ್ರರು ದಾಳಿ ನಡೆಸಿದ್ದು, 14 ಮಂದಿಗೆ ಗಾಯಗಳಾಗಿವೆ. 


            ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಸಂಜೆ ವೇಳೆ ಪಂಥಾ ಚೌಕ್ ಬಳಿಯ ಝೆವಾನ್ ನಲ್ಲಿ ಈ ದಾಳಿ ನಡೆದಿದ್ದು, 14 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 

               ಘಟನಾ ಪ್ರದೇಶವನ್ನು ಸಂಪೂರ್ಣ ಪೊಲೀಸ್, ಭದ್ರತಾ ಸಿಬ್ಬಂದಿಗಳು ಸುತ್ತುವರೆದಿದ್ದು, ಉಗ್ರರನ್ನು ಹಿಡಿಯಲು ಶೋಧಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 


    ಕಾಮೆಂಟ್‌‌ ಪೋಸ್ಟ್‌ ಮಾಡಿ

    0 ಕಾಮೆಂಟ್‌ಗಳು
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    Below Post Ad

    Qries