ತಿರುವನಂತಪುರಂ: ರಾಜ್ಯದಲ್ಲಿ ಇಂದು 2434 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರ್ನಾಕುಳಂ 525, ತಿರುವನಂತಪುರ 428, ಕೋಝಿಕ್ಕೋಡ್ 315, ಕಣ್ಣೂರು 224, ಕೊಲ್ಲಂ 163, ಕೊಟ್ಟಾಯಂ 147, ತ್ರಿಶೂರ್ 136, ಆಲಪ್ಪುಳ 83, ಮಲಪ್ಪುರಂ 83, ಪತ್ತನಂತಿಟ್ಟ 76, ಪಾಲಕ್ಕಾಡ್ 68, ಇಡುಕ್ಕಿ 63, ಕಾಸರಗೋಡು 54, ವಯನಾಡ್ 39 ಎಂಬಂತೆ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 50,446 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕಿನ ಜನಸಂಖ್ಯೆಯ ಅನುಪಾತ (WIPR) 10 ಕ್ಕಿಂತ ಹೆಚ್ಚಿನ 5 ಸ್ಥಳೀಯಾಡಳಿತ ಪ್ರದೇಶಗಳಲ್ಲಿ 6 ವಾರ್ಡ್ಗಳಿವೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 1,60,033 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 1,55,720 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 4,313 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಪ್ರಸ್ತುತ, 36,281 ಕೊರೋನಾ ಪ್ರಕರಣಗಳಲ್ಲಿ, ಕೇವಲ 8.1 ಪ್ರತಿಶತದಷ್ಟು ಜನರು ಆಸ್ಪತ್ರೆಗಳು / ಸ್ಥಳೀಯ ಆಸ್ಪತ್ರೆಗಳಲ್ಲಿದ್ದಾರೆ.
ಕಳೆದ 25 ಗಂಟೆಗಳಲ್ಲಿ ಕೋವಿಡ್ ಬಾಧಿಸಿದ 38 ಮಂದಿ ಮೃತರಾಗಿದ್ದಾರೆ. ಇದಲ್ಲದೆ, ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ 165 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 43,170ಕ್ಕೆ ಏರಿಕೆಯಾಗಿದೆ. ಇಂದು ಕೋವಿಡ್ ಪತ್ತೆಯಾದವರಲ್ಲಿ ಆರು ಮಂದಿ ಹೊರ ರಾಜ್ಯದವರು. 2266 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 145 ಮಂದಿಯ ಸಂಪರ್ಕ ಮೂಲವು ಸ್ಪಷ್ಟವಾಗಿಲ್ಲ. ಇಂದು ಹದಿನೇಳು ಮಂದು ಆರೋಗ್ಯ ಕಾರ್ಯಕರ್ತರಿಗೂ ಸೋಂಕು ಪತ್ತೆಹಚ್ಚಲಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 4308 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 712, ಕೊಲ್ಲಂ 230, ಪತ್ತನಂತಿಟ್ಟ 192, ಆಲಪ್ಪುಳ 171, ಕೊಟ್ಟಾಯಂ 456, ಇಡುಕ್ಕಿ 146, ಎರ್ನಾಕುಳಂ 704, ತ್ರಿಶೂರ್ 242, ಪಾಲಕ್ಕಾಡ್ 60, ಮಲಪ್ಪುರಂ 101, ಕೋಝಿಕ್ಕೋಡ್ 824, ವಯನಾಡ್ 153, ಕಣ್ಣೂರು 276, ಮತ್ತು ಕಾಸರಗೋಡು 41 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 36,281 ಮಂದಿಗೆ ಸೋಂಕು ದೃಢಪಟ್ಟಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 51,16,928 ಮಂದಿ ಕೊರೊನಾದಿಂದ ಮುಕ್ತರಾಗಿದ್ದಾರೆ.

