HEALTH TIPS

ಶಿವಶಕ್ತಿ ಪೆರಡಾಲ ಇದರ 29ನೇ ವಾರ್ಷಿಕೋತ್ಸವ, ನೃತ್ಯಾರ್ಪಣಂ, ಗುರುವಂದನೆ

              ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಧÀನುಸಂಕ್ರಮಣ ಮಹೋತ್ಸವದ ಸಂದರ್ಭದಲ್ಲಿ ಶ್ರೀ ಶಿವಶಕ್ತಿ ಪೆರಡಾಲ ಇದರ 29ನೇ ವಾರ್ಷಿಕೋತ್ಸವದ ಅಂಗವಾಗಿ ಬುಧÀವಾರ ರಾತ್ರಿ ಪೆರಡಾಲ ಶ್ರೀ ಉದನೇಶ್ವರ ಸಭಾ ಭವನದಲ್ಲಿ ನೃತ್ಯಾರ್ಪಣಂ ಕಾರ್ಯಕ್ರಮ ಜರಗಿತು. ನಟುವಾಂಗದಲ್ಲಿ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಪುತ್ತೂರು, ಹಾಡುಗಾರಿಕೆಯಲ್ಲಿ ರಾಜ್ಯ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ವಿದ್ವಾನ್ ವೆಳ್ಳಿಕೋತ್ ವಿಷ್ಣು ಭಟ್, ವಸಂತ ಕುಮಾರ್ ಗೋಸಾಡ, ಮೃದಂಗದಲ್ಲಿ ಗೀತೇಶ್ ಕುಮಾರ್ ನೀಲೇಶ್ವರ, ಕೊಳಲಿನಲ್ಲಿ ರಾಜಗೋಪಾಲ್ ಕಾಞಂಗಾಡು ಸಹಕರಿಸಿದರು. ಬದಿಯಡ್ಕ ಶಾಖೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದೇ ಸಂದಭರ್Àದಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2020ರಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಬದಿಯಡ್ಕ ಶಾಖೆಯ ವಿದ್ಯಾರ್ಥಿಗಳಿಂದ ಗುರುವಂದನೆ ಜರಗಿತು. ವಿದ್ಯಾರ್ಥಿಗಳಾದ ಶಮಾ ವಳಕ್ಕುಂಜ, ಧೃತಿ ಕೊರೆಕ್ಕಾನ, ಸುಮೇಧಾ ಕಲ್ಲಕಟ್ಟ, ಸಮನ್ವಿತಾ ವಳಕ್ಕುಂಜ, ದೀಕ್ಷಾ ಬದಿಯಡ್ಕ, ಅವ್ಯಯ ಸುಧಾ ಚೂರಿಕ್ಕೋಡು, ಸ್ವಾತಿ ಕಾರ್ಯಾಡು, ವೈಶಾಲಿ ಮಿಂಚಿನಡ್ಕ ಫಲಕಾಣಿಕೆಗಳನ್ನಿತ್ತು ಗೌರವಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries