HEALTH TIPS

ಹುಶಾರ್: ಮತೀಯ ತೀರ್ವವಾದ ಉತ್ತೇಜಿಸುವ ಸಂದೇಶಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು: ಕೇರಳ ಪೊಲೀಸರಿಂದ ಎಚ್ಚರಿಕೆ


       ತಿರುವನಂತಪುರಂ: ಆಲಪ್ಪುಳದಲ್ಲಿ ನಡೆದ ಜೋಡಿ ಕೊಲೆಗಳ ಹಿನ್ನೆಲೆಯಲ್ಲಿ ಮತ ಸಂಘರ್ಷಕ್ಕೆ  ಉತ್ತೇಜಿಸುವ ಸಂದೇಶಗಳನ್ನು ಹರಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.  ಪೊಲೀಸರು ಎಸ್‌ಡಿಪಿಐ ಕಾರ್ಯಕರ್ತರಲ್ಲಿ ಜೈ ಶ್ರೀರಾಮ್ ಎಂದು ಕೂಗಲು ಒತ್ತಾಯಿಸಿದ್ದಾರೆ ಕಲ ಎಂಬ ಆರೋಪದ ನಡುವೆ ಪೊಲೀಸರು ಫೇಸ್‌ಬುಕ್ ಪೋಸ್ಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ .
           ಸಾಮಾಜಿಕ ಜಾಲತಾಣಗಳ ಮೂಲಕ ಜಾತೀಯತೆಯನ್ನು ಉತ್ತೇಜಿಸುವ ಹಾಗೂ ಸಮಾಜದಲ್ಲಿ ಒಡಕು ಮೂಡಿಸುವ ಸಂದೇಶಗಳು ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ.  ಅಂತಹ ಸಂದೇಶಗಳನ್ನು ರಚಿಸುವ, ಪ್ರಸಾರ ಮಾಡುವ ಮತ್ತು ಅಡ್ಮಿನ್ ಮಾಡುವವರು ಮತ್ತು ಅಂತಹ ಗುಂಪುಗಳ ಅಡ್ಮಿನ್‌ಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರ ಫೇಸ್‌ಬುಕ್ ಪೋಸ್ಟ್ ಹೇಳಿದೆ.
         ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಹತ್ಯೆ ಆರೋಪಿಗಳನ್ನು ಪತ್ತೆ ಮಾಡುವಂತೆ ಎಸ್‌ಡಿಪಿಐ ಕಾರ್ಯಕರ್ತರನ್ನು ಪ್ರಶ್ನಿಸಿದ ಪೊಲೀಸರು ಜಯಶ್ರೀ ರಾಮ್‌ ಎಂದು ಘೋಷಿಸಲು ಒತ್ತಡ ಹಾಕಿದ್ದು,  ಅವಿಧೇಯರಾದವರನ್ನು ಬರ್ಬರವಾಗಿ ಥಳಿಸಿದ್ದಾರೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಶ್ರಫ್ ಮೌಲವಿ ಆರೋಪಿಸಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries