ಕಾಸರಗೋಡು: ಗಡಿನಾಡಿನಲ್ಲಿ ಕಳೆದ ಐದು ದಶಕಗಳಿಂದಕನ್ನಡರಂಗಭೂಮಿ, ಕಿರುತೆರೆ, ಸಿನಿಮಾ, ಯಕ್ಷಗಾನ ಸೇರಿದಂತೆ ಸಾಂಸ್ಕøತಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಾಸು ಬಾಯಾರ್ ಅವರಿಗೆ ಕರ್ನಾಟಕ ಸಾಂಸ್ಕøತಿಕ ಪರಿಷತ್ ಮತ್ತು ಬೆಂಗಳೂರಿನ ಸೃಷ್ಟಿ ಶಕ್ತಿ ಸಂಸ್ಥೆ ಆಯೋಜಿಸಿದ ರಾಜ್ಯಮಟ್ಟದ ಕರ್ನಾಟಕ ವೈಭವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಆಕಾಶವಾಣಿಯ ಬಿ ಗ್ರೇಡ್ ಕಲಾವಿದರಾಗಿರುವ ಇವರು ದೂರದರ್ಶನ ಹಾಗೂ ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುವ ಸಾಕ್ಷ್ಯಚಿತ್ರ, ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ವಠಾರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೆಂಗಳೂರಿನ ಶ್ರೀವಿದ್ಯಾ ಮಹಾಸಂಸ್ಥಾನದ ಸಾಧ್ವಿ ಯೋಗಿಣಿ ಮಾತಾಶ್ರೀ ಉಪಸ್ಥೀತಿಯಲ್ಲಿ ಪ್ರಶಸ್ತಿಪ್ರದಾನ ಮಾಡಲಾಯಿತು. ಕೆ.ವಿ ಲಕ್ಷ್ಮಣ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು.