HEALTH TIPS

ಗಂಗಾನದಿಯಲ್ಲಿ ಪ್ರಧಾನಿ ಪುಣ್ಯಸ್ನಾನ: ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಚಾಲನೆ

                    ನವದೆಹಲಿ: ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಉದ್ಘಾಟನೆಗೆ ಉತ್ತರ ಪ್ರದೇಶದ ವಾರಣಾಸಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಗಂಗಾನದಿ ಯಲ್ಲಿ ಪುಣ್ಯಸ್ನಾನ ಮಾಡಿದರು. ರುದ್ರಾಕ್ಷಿ ಹಿಡಿದು ಕೆಲಕಾಲ ಜಪ ಮಾಡುವ ಮೂಲಕ ಗಮನ ಸೆಳೆದರು.

             ಈ ವೇಳೆ  ದೇವಸ್ಥಾನದ ಅರ್ಚಕರು ಮೋದಿಗೆ ದೃಷ್ಟಿ ನಿವಾರಣೆ ಮಾಡಿದ್ದಾರೆ. ಕಾಲಭೈರವೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಮೋದಿ ಸಲ್ಲಿಸಿದ್ದಾರೆ. ಹೂವಿನ ಮಾಲೆ ಹಾಕಿ ಆರತಿ ಬೆಳಗಿ ಮೋದಿ ತಲೆ ಬಾಗಿ ನಮಸ್ಕರಿಸಿದ್ದಾರೆ. ಈ ವೇಳೆ ದೇವಸ್ಥಾನದ ಅರ್ಚಕರು ಮೋದಿ ಅವರ ಹಣೆಗೆ ತಿಲಕ ಇಟ್ಟು ಆಶಿರ್ವ ದಿಸಿದ್ದಾರೆ.

                ಮೋದಿ ಅವರ ಈ ವಿಶೇಷ ಪೂಜೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಜೊತೆಯಾಗಿದ್ದರು. ಸುಮಾರು 900 ಕೋಟಿ.ರೂ ವೆಚ್ಚದಲ್ಲಿ ನಿರ್ಮಿಸಲಾದ ಶ್ರೀ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯ ಮೊದಲ ಹಂತಕ್ಕೆ ಚಾಲನೆ ನೀಡಿದರು. 

              ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಮೋದಿಯವರ ಕನಸಿನ ಯೋಜನೆ ಯಾಗಿದ್ದು, ಸುಮಾರು 5 ಸಾವಿರ ಚದರಿ ಅಡಿ ಪ್ರದೇಶಕ್ಕೆ ದೇಗುಲ ವ್ಯಾಪ್ತಿ ವಿಸ್ತಾರವಾಗಿದೆ. ಕಾರಿಡಾರ್ 320 ಮೀಟರ್ ಉದ್ದ ಮತ್ತು 20 ಮೀಓಟರ್ ಅಗಲ ಇದೆ. ಮೊದಲಿನಂತೆ ಕಿಕ್ಕಿರಿದ ರಸ್ತೆಗಳ ಬದಲಾಗಿ ಇದೀಗ ಸರಾಗವಾಗಿ ಕೇವಲ ಒಂದು ನಿಮಿಷದಲ್ಲಿ ದೇಗುಲದಿಂದ ಲಲಿತಾಘಾಟ್ ಗೆ ತಲುಪಬಹುದಾಗಿದೆ.

              ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸೋಮವಾರ ತಮ್ಮ ಸ್ವಕ್ಷೇತ್ರ ವಾರಣಾಸಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ.  ಈ ಸಂದರ್ಭ ದಲ್ಲಿ ಪ್ರಧಾನಿಯವರನ್ನು ನೋಡಲು ಜನರು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರು. ಪ್ರಧಾನಿಯವರಿಗೆ ಸ್ಥಳೀಯರು ಅದ್ದೂರಿ ಪ್ರೀತಿಪೂರ್ವಕ ಸ್ವಾಗತ ನೀಡಿದರು. ಅವರ ಕಡೆ ಕೈಬೀಸುತ್ತಾ ಪ್ರಧಾನಿ ಮುಗುಳ್ನಗುತ್ತಾ ಧನ್ಯವಾದ ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries