HEALTH TIPS

ಕುತುಬ್‌ ಮಿನಾರ್‌: ವಿಗ್ರಹಗಳ ಪ್ರತಿಷ್ಠಾಪನೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾ

                  ನವದೆಹಲಿಕುತುಬ್‌ ಮಿನಾರ್‌ ಸಂಕೀರ್ಣದಲ್ಲಿ ಹಿಂದೂ ಮತ್ತು ಜೈನರ ಆರಾಧನಾ ಮೂರ್ತಿಗಳನ್ನು ಪುನರ್‌ ಪ್ರತಿಷ್ಠಾಪಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.

                ಮಹಮ್ಮದ್‌ ಘೋರಿ ಆಡಳಿತದಲ್ಲಿ ಸೇನಾ ನಾಯಕನಾಗಿದ್ದ ಕುತುಬುದ್ದೀನ್‌ ಐಬಕ್‌ 27 ದೇವಾಲಯಗಳನ್ನು ಭಾಗಶಃ ಧ್ವಂಸ ಮಾಡಿದ್ದು, ಇವುಗಳ ಸಾಮಗ್ರಿಗಳನ್ನು ಬಳಸಿ ಕುತುಬ್‌ ಮಿನಾರ್‌ ಸಂಕೀರ್ಣದೊಳಗೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಜೈನ ತೀರ್ಥಂಕರ ವೃಷಭದೇವ ಮತ್ತು ಹಿಂದೂ ದೇವರು ವಿಷ್ಣುವಿನ ಮೂರ್ತಿಯನ್ನು ಸಂಕೀರ್ಣದಲ್ಲಿ ಪುನರ್‌ ಪ್ರತಿಷ್ಠಾಪಿಸಬೇಕು ಎಂದು ಕೋರಲಾಗಿದೆ.

              ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಧೀಶೆ ನೇಹಾ ಶರ್ಮಾ 'ಭಾರತವು ಸಂಪನ್ನ ಸಾಂಸ್ಕೃತಿಕ ಇತಿಹಾಸವನ್ನು ಹೊಂದಿದೆ. ಇಲ್ಲಿ ಅಸಂಖ್ಯಾತ ರಾಜವಂಶಸ್ಥರು ಆಳ್ವಿಕೆ ನಡೆಸಿದ್ದಾರೆ. ಹಿಂದೆ ತಪ್ಪುಗಳಾಗಿವೆ ಎಂಬುದನ್ನು ಯಾರೂ ನಿರಾಕರಿಸುತ್ತಿಲ್ಲ. ಆದರೆ ಆ ತಪ್ಪುಗಳು ಪ್ರಸ್ತುತ ಸಮಾಜದ ಶಾಂತಿ ಕದಡಲು ಕಾರಣವಾಗಬಾರದು' ಎಂದಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries