HEALTH TIPS

ಕೆ-ರೈಲ್ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಸರ್ಕಾರದಿಂದ ಪರಿಹಾರ ಅಭಿಯಾನ: ಜಾಗ ಕೊಟ್ಟರೆ ಕೋಟಿಗಟ್ಟಲೆ ಆರ್ಥಿಕ ನೆರವು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ

   

               ತಿರುವನಂತಪುರ; ರಾಜ್ಯ ಸರ್ಕಾರದ ಸಿಲ್ವರ್‍ಲೈನ್ ಯೋಜನೆ ವಿರುದ್ಧದ ಪ್ರತಿಭಟನೆಗಳನ್ನು ಹತ್ತಿಕ್ಕಲು ಕೆ ರೈಲ್ ಸಾಮಾಜಿಕ ಮಾಧ್ಯಮ ಅಭಿಯಾನವನ್ನು ಪ್ರಾರಂಭಿಸಿದೆ. ಯೋಜನೆಗೆ ಭೂಮಿ ಬಿಟ್ಟುಕೊಡುವವರಿಗೆ ಕೋಟ್ಯಂತರ ರೂಪಾಯಿ ಹಣ ನೀಡುವುದಾಗಿ ಪ್ರಚಾರ ಮಾಡಲಾಗುತ್ತಿದ್ದು, ಸರ್ಕಾರ ಕೊಟ್ಟ ಮಾತು ಉಳಿಸಿಕೊಳಲಿದೆಯೆ ಎಂಬ ಕುತೂಹಲ ಮೂಡಿದೆ. ಸಿಲ್ವರ್‍ಲೈನ್ ಯೋಜನೆ ವಿರುದ್ಧ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳ ನಡುವೆಯೇ ಈ ಅಭಿಯಾನ ನಡೆದಿದೆ.

                 ರಾಷ್ಟ್ರೀಯ ಹೆದ್ದಾರಿಗೆ ಭೂಮಿ ಹಸ್ತಾಂತರಿಸಿದವರು ದೊಡ್ಡ ಮೊತ್ತದ ಪರಿಹಾರ ಪಡೆದಿರುವ ವಿಡಿಯೋಗಳನ್ನು ಕೆ ರೈಲ್ ಹೆಸರಲ್ಲಿ ನಿರ್ಮಿಸಿ ಪ್ರಸಾರ ಮಾಡಿದೆ. ವಿಡಿಯೋ ಪ್ರಕಾರ ಸರ್ಕಾರಿ ಯೋಜನೆಗಳಿಗೆ ಭೂಮಿ ಕೊಡುವವರಿಗೆ ಕಣ್ಣೊರೆಸುವ ಪರಿಹಾರ ಸಿಗಲಿದೆ. ಖಾತೆಗೆ ಹಣ ಜಮಾ ಆದ ನಂತರವೇ ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಲಿದ್ದಾರೆ ಎನ್ನಲಾಗಿದೆ.

              ಜಮೀನು ಕೊಟ್ಟವರಿಗೆ ದೊಡ್ಡ ಮೊತ್ತದ ಹಣ ನೀಡಲಾಗುತ್ತಿದೆ ಎಂದು ಜನರಿಗೆ ಮನವರಿಕೆ ಮಾಡಿಕೊಡಲು ರಾಜ್ಯ ಸರ್ಕಾರ ಮಾಡಿರುವ ತಂತ್ರ ಇದಾಗಿದೆ ಎನ್ನಲಾಗಿದೆ. ಈ ವೀಡಿಯೊಗಳನ್ನು ಪ್ರಸಾರ ಮಾಡುವ ಮೂಲಕ ಪ್ರಸ್ತುತ ಪ್ರತಿಭಟನೆಗಳನ್ನು ಶಮನಗೊಳಿಸಲು ಸಾಧ್ಯವಾಗುತ್ತದೆ ಎಂದು ಸರ್ಕಾರ ಭಾವಿಸುತ್ತದೆ. ಆದರೆ ವಿರೋಧ ಪಕ್ಷಗಳು ಮತ್ತು ಜನರು ಪ್ರತಿಭಟನೆಯಿಂದ ಒಂದು ಹೆಜ್ಜೆ ಹಿಂದೆ ಸರಿಯುವುದಿಲ್ಲ ಎಂದು ಕಿಡಿಕಾರಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries