HEALTH TIPS

ಹರಿದ್ವಾರದ ಗಂಗಾ ನದಿಯಲ್ಲಿ ಜನರಲ್ ಬಿಪಿನ್ ರಾವತ್ ದಂಪತಿ ಅಸ್ಥಿ ವಿಸರ್ಜನೆ

            ಡೆಹ್ರಾಡೂನ್: ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿದ್ದ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಅವರ ಅಸ್ಥಿಯನ್ನು ಹರಿದ್ವಾರದ ಗಂಗಾ ನದಿಯಲ್ಲಿ ವಿಸರ್ಜಿಸಲಾಯಿತು.

            ಅರ್ಚಕರಾದ ಆದಿತ್ಯ ವಸಿಷ್ಠ ಮತ್ತು ಪರಿಕ್ಷಿತ್ ಶಿಕೋಲಾ ಅವರು ವಿಧಿ ವಿಧಾನಗಳನ್ನು ನೆರವೇರಿಸಿದರು.

             ಸಕಲ ಮಿಲಿಟರಿ ಗೌರವಗಳೊಂದಿಗೆ ಜನರಲ್ ರಾವತ್ ಮತ್ತು ಅವರ ಪತ್ನಿಯ ಚಿತಾಭಸ್ಮವನ್ನು ಅವರ ಪುತ್ರಿಯರಾದ ತಾರಿಣಿ ಮತ್ತು ಕೃತಿಕಾ ನದಿಯಲ್ಲಿ ವಿಸರ್ಜಿಸಿದರು.

ಉತ್ತರಾ ಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಚೌಧರಿ ಚರಣ್ ಸಿಂಗ್ ಘಾಟ್ (VIP Ghat) ಬಳಿ ರಾವತ್ ಅವರ ಇಬ್ಬರು ಪುತ್ರಿಯರನ್ನು ಭೇಟಿ ಮಾಡಿದರು.

            'ಜನರಲ್ ರಾವತ್ ಅವರು ಜನರ ನೆನಪಿನಲ್ಲಿ ಸದಾ ಉಳಿಯುತ್ತಾರೆ' ಎಂದು ಹೇಳಿದರು.

ಭಾರತದ ಮೊದಲ ಸಿಡಿಎಸ್ ಜನರಲ್ ರಾವತ್ ಮತ್ತು ಪತ್ನಿ ಮಧುಲಿಕಾ ಸೇರಿದಂತೆ ಇತರೆ 11 ಜನರು ತಮಿಳುನಾಡಿನ ಕೂನೂರು ಬಳಿ ಡಿಸೆಂಬರ್ 08ರಂದು ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿದ್ದರು.

             ದೆಹಲಿಯ ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿ ಸಕಲ ಮಿಲಿಟರಿ ಗೌರವಗಳೊಂದಿಗೆ ಶುಕ್ರವಾರ (ಡಿ.10) ಅಂತ್ಯಕ್ರಿಯೆ ನೆರವೇರಿತು. ರಾವತ್ ಅವರು ಉತ್ತರಾಖಂಡದ ಪೌರಿ ಜಿಲ್ಲೆಯ ಸೈನಾ ಗ್ರಾಮದವರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries