HEALTH TIPS

ದೆಹಲಿ ವಿಧಾನಸಭೆ ಆವರಣದಲ್ಲಿ ಕೊರೊನಾ ವಾರಿಯರ್ಸ್ ಸ್ಮಾರಕ: ರಾಮ್ ನಿವಾಸ್ ಗೋಯಲ್

                 ನವದೆಹಲಿಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ಸೇವೆ ಸಲ್ಲಿಸಿ ಪ್ರಾಣ ತ್ಯಾಗ ಮಾಡಿದ 'ಕೊರೊನಾ ವಾರಿಯರ್ಸ್‌'ಗಳ ಸ್ಮರಣಾರ್ಥ ವಿಧಾನಸಭೆ ಆವರಣದಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ದೆಹಲಿ ವಿಧಾನಸಭೆ ಸ್ಪೀಕರ್ ರಾಮ್ ನಿವಾಸ್ ಗೋಯಲ್ ಭಾನುವಾರ ತಿಳಿಸಿದ್ದಾರೆ.

            ವೈದ್ಯರು, ದಾದಿಯರು, ಸ್ಯಾನಿಟೈಸೇಷನ್ ಕಾರ್ಯಕರ್ತರು ಮತ್ತು ಶಿಕ್ಷಕರು ಸೇರಿದಂತೆ ಸಾಕಷ್ಟು ಮಂದಿ ಕೋವಿಡ್ ಕರ್ತವ್ಯದ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಅವರೆಲ್ಲ ಜನರ ಜೀವ ಉಳಿಸುವುದಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದ್ದಾರೆ. ಅವರ ಅತ್ಯುನ್ನತ ಸೇವೆಯನ್ನು ಪರಿಗಣಿಸಿ, ದೆಹಲಿ ವಿಧಾನಸಭೆ ಆವರಣದಲ್ಲಿ ಕೊರೊನಾ ವಾರಿಯರ್ಸ್ ಸ್ಮಾರಕ ನಿರ್ಮಿಸಲಾಗುವುದು. ವಾರಿಯರ್‌ಗಳ ಕರ್ತವ್ಯದ ಬಗೆಗಿನ ಮಾಹಿತಿಯನ್ನು ಹೊಂದಿರುವ ಶಾಸನಗಳನ್ನು ನಿರ್ಮಿಸಲಾಗುತ್ತದೆ ಎಂದು ಗೋಯಲ್ ಹೇಳಿದ್ದಾರೆ.

              ಶಾಸನಗಳು ಕೊರೊನಾ ವಾರಿಯರ್ಸ್‌ಗಳ ಸೇವೆಯನ್ನು ಪ್ರತಿನಿಧಿಸುವ ಸೂಚಕಗಳನ್ನು ಹೊಂದಿರಲಿವೆ. ಈ ಬಗ್ಗೆ ಮಾತನಾಡಿರುವ ಗೋಯಲ್, 'ಸಣ್ಣ ಗೋಡೆ ಮಾದರಿಯ ವಿನ್ಯಾಸದ ಮೇಲೆ ಕೊರೊನಾ ವಾರಿಯರ್ಸ್‌ಗಳನ್ನು ಪ್ರತಿನಿಧಿಸುವ ಸ್ಟೆಥೋಸ್ಕೋಪ್, ರಕ್ತದೊತ್ತಡ ಪರೀಕ್ಷಿಸುವ ಯಂತ್ರ, ಪುಸ್ತಕ, ಪೊರಕೆ, ಇಂಜೆಕ್ಷನ್‌ ಹಾಗೂ ಇತ್ಯಾದಿ ಗುರುತುಗಳನ್ನು ಕೆತ್ತಲಾಗುತ್ತದೆ. ಸಿದ್ಧತೆ ಪೂರ್ಣಗೊಂಡಿದ್ದು, ಯೋಜನೆಯ ಕಾರ್ಯ ಆರಂಭವಾಗಿದೆ. ಸ್ಮಾರಕದ ಉದ್ಘಾಟನೆ ಮುಂದಿನ ವರ್ಷ ಜನವರಿ 26ಕ್ಕೆ ನೆರವೇರುವ ವಿಶ್ವಾಸವಿದೆ' ಎಂದಿದ್ದಾರೆ.

                ಸ್ಮಾರಕವನ್ನು ವಿಧಾನಸಭೆ ಪ್ರವೇಶ ದ್ವಾರದ ಬಳಿ ಇರುವ ವಿಠಲ್‌ಭಾಯ್ ಪಟೇಲ್ ಪ್ರತಿಮೆಯ ಹಿಂದೆ ನಿರ್ಮಿಸಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries