HEALTH TIPS

ಜ.15ರಂದು ಅಗಲ್ಪಾಡಿ ಶ್ರೀ ಗೋಪಾಲಕೃಷ್ಣ ಭಜನ ಮಂದಿರದ ಭೋಜನ ಶಾಲೆ, ಸಭಾ ಭವನ ಲೋಕಾರ್ಪಣೆ

      

                    ಬದಿಯಡ್ಕ: ಅಗಲ್ಪಾಡಿ ಶ್ರೀ ಗೋಪಾಲಕೃಷ್ಣ ಭಜನ ಮಂದಿರದ ಭೋಜನ ಶಾಲೆ ಮತ್ತು ಸಭಾ ಭÀವನದ ಉದ್ಘಾಟನಾ ಸಮಾರಂಭ ಜ.14,15,16 ದಿನಾಂಕಗಳಂದು ನಡೆಯಲಿರುವುದು. ವೇದಮೂರ್ತಿ ಬಳ್ಳಪದವು ಡಾ. ಮಾಧವ ಉಪಾಧ್ಯಾಯರ ದಿವ್ಯ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಲಿರುವುದು.

                     ಜ.14ರಂದು ಬೆಳಗ್ಗೆ 6.57ಕ್ಕೆ ದೀಪ ಪ್ರಜ್ವಲನೆ, ಭಜನೋತ್ಸವ ಉದ್ಘಾಟನೆ, ಮಧ್ಯಾಹ್ನ 1.15ಕ್ಕೆ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಸನ್ನಿಯಿಂದ ಹಸಿರುವಾಣಿ ಹೊರೆಕಾಣಿಕೆ, ರಾತ್ರಿ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ, ಭೋಜನ ಪ್ರಸಾದ ನಡೆಯಲಿದೆ.


                 ಜ.15ರಂದು ಬೆಳಗ್ಗೆ 6. ಗಂಟೆಯಿಂದ ಅಷ್ಟನಾಳಿಕೇರ ಮಹಾಗಣಪತಿ ಹೋಮ, 8 ಗಂಟೆಗೆ ಪೂರ್ಣಾಹುತಿ, ವಿವಿಧ ಭಜನಾ ಸಂಘಗಳಿಂದ ಭಜನೆ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಶ್ರೀ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಶ್ರೀ ಮಂದಿರದ ತಂತ್ರಿವರ್ಯ ಬ್ರಹ್ಮಶ್ರೀ ವೇದಮೂರ್ತಿ ಬಳ್ಳಪದವು ಡಾ. ಮಾಧವ ಉಪಾಧ್ಯಾಯ  ಅವರ ಆಗಮನ, ಪೂರ್ಣಕುಂಭ ಸ್ವಾಗತ, 10.31ರಿಂದ 12 ಗಂಟೆಯ ನಡುವಿನ ಶುಭಮುಹೂರ್ತದಲ್ಲಿ ಸಭಾ ಭವನ ಹಾಗೂ ಭೋಜನ ಶಾಲೆ ಉದ್ಘಾಟನೆ. ನಂತರ ನಡೆಯುವ ಧಾರ್ಮಿಕ ಸಭೆಯಲ್ಲಿ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಧಾರ್ಮಿಕ ಭಾಷಣ ಮಾಡಲಿದ್ದಾರೆ. ಪ್ರಖ್ಯಾತ ಚಿಂತಕ ರಾಮ್ ಮಾಧವ್ ದೆಹಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಮಲ್ಲ ಕ್ಷೇತ್ರದ ಆಡಳಿತ ಮೊಕ್ತೇಸರ ಆನೆಮಜಲು ವಿಷ್ಣು ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ ಪೂಜೆ, ಪ್ರಸಾದ ವಿತರಣೆ, ಅಪರಾಹ್ನ ಮಹಿಳಾ ಸಮಾವೇಶ ನಡೆಯಲಿದೆ. ಒಡಿಯೂರು ಪರಮಪೂಜ್ಯ ಸಾದ್ವಿ ಶ್ರೀ ಮಾತಾನಂದಮಯಿ ಅವರಿಂದ ಆಶೀರ್ವಚನ. ಕರ್ನಾಟಕದ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಉದ್ಘಾಟಿಸಲಿದ್ದಾರೆ. ಸಂಜೆ 7ರಿಂದ ಸಬ್ಬಣಕೋಡಿ ರಾಮ ಭಟ್ ಶಿಷ್ಯವೃಂದದವರಿಂದ ಚಕ್ರ ಚಂಡಿಕೆ ಯಕ್ಷಗಾನ, 10 ಗಂಟೆಗೆ ಪೂಜೆ, ಪ್ರಸಾದ ವಿತರಣೆ, ಭೋಜನ ಪ್ರಸಾದ. ಜ.16ರಂದು ಬೆಳಗ್ಗೆ ಭಜನೆ, 10.30ರಿಂದ ನಡೆಯುವ ಧಾರ್ಮಿಕ ಸಭೆಯಲ್ಲಿ ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು ಹಾಗೂ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಕೊಂಡೆಯೂರು ಆಶೀರ್ವಚನ ನೀಡುವರು. ಧಾರ್ಮಿಕ ಮುಂದಾಳು ಸಂಜೀವ ಶೆಟ್ಟಿ ಮೊಟ್ಟೆಕುಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಧಾ|ರ್ಮಿಕ ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ ಮಹಾಪೂಜೆ, ಭೋಜನ ಪ್ರಸಾದ ನಡೆಯಲಿದೆ.

                 ಅಪರಾಹ್ನ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡುವರು.  ವಿಶ್ವಹಿಂದೂ ಪರಿಷತ್ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷೆ ಮೀರಾ ಆಳ್ವ ಹಾಗೂ ತೀಯ ಮಹಾಸಭಾದ ಕೇರಳ ರಾಜ್ಯ ಅಧ್ಯಕ್ಷ ಗಣೇಶ್ ಅರಮಂಗಾನ ಅವರು ಧಾರ್ಮಿಕ ಉಪನ್ಯಾಸ ನೀಡುವರು. ಉದ್ಘಾಟನಾ ಸಮಿತಿಯ ಕಾರ್ಯಾಧ್ಯಕ್ಷ ಮಧುಸೂದನ ಆಯರ್ ಮಂಗಳೂರು ಅಧ್ಯಕ್ಷತೆ ವಹಿಸಲಿದ್ದಾರೆ. ಊರ ಪರವೂರ ಪ್ರಮುಖರು, ಧಾರ್ಮಿಕ ಮುಂದಾಳುಗಳು ವೇದಿಕೆಯನ್ನು ಅಲಂಕರಿಸಲಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries