HEALTH TIPS

ಕೇರಳದಲ್ಲಿ 20 ರಿಂದ 30 ವರ್ಷ ವಯಸ್ಸಿನ ಜನರಲ್ಲಿ ಕೋವಿಡ್ ಹರಡುವಿಕೆ ತೀವ್ರ: ಮಾಹಿತಿ ಹಂಚಿಕೊಂಡ ಸಚಿವೆ

                                                           

                    ತಿರುವನಂತಪುರ: ರಾಜ್ಯದಲ್ಲಿ 20ರಿಂದ 30 ವರ್ಷದೊಳಗಿನವರಲ್ಲಿ ಕೋವಿಡ್ ಸೋಂಕು ಹೆಚ್ಚು ಹರಡುತ್ತಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಲಸಿಕೆ ಹಾಕಿಸಿಕೊಳ್ಳದೇ ಇರುವವರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ರೋಗಿಗಳ ಸಂಖ್ಯೆ ಹೆಚ್ಚಿದ್ದರೂ ಆತಂಕ, ಭಯ ಪಡುವ ಅಗತ್ಯವಿಲ್ಲ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದರು.

                                  ರಾಜ್ಯದಲ್ಲಿ ಒಮಿಕಾನ್ ಹರಡಿರುವುದನ್ನು ಖಚಿತಪಡಿಸಿದ ಆರೋಗ್ಯ ಸಚಿವರು: 

                ರಾಜ್ಯದ ಆಸ್ಪತ್ರೆಗಳಲ್ಲಿ ಶೇ.57ರಷ್ಟು ಐಸಿಯು ಬೆಡ್‍ಗಳು ಖಾಲಿ ಇವೆ. 86ರಷ್ಟು ವೆಂಟಿಲೇಟರ್ ಖಾಲಿ ಇದೆ. ವೈದ್ಯಕೀಯ ಕಾಲೇಜುಗಳಲ್ಲಿ ಕೋವಿಡ್ ಪ್ರೊಟೋಕಾಲ್ ಕೊಠಡಿಯನ್ನು ಸ್ಥಾಪಿಸಲಾಗುವುದು. ರಕ್ಷಣಾ ಚಟುವಟಿಕೆಗಳಿಗೆ 4917 ಮಂದಿಯನ್ನು ನೇಮಿಸಿಕೊಳ್ಳಲಾಗುವುದು. ಆರೋಗ್ಯ ಕಾರ್ಯಕರ್ತರಲ್ಲಿ ಕೋವಿಡ್ ಹರಡುವುದನ್ನು ತಡೆಯಲು ವಿಶೇಷ ವ್ಯವಸ್ಥೆ ಮಾಡಲಾಗುವುದು. ಮಕ್ಕಳ ಲಸಿಕೆಯಲ್ಲಿ ಹಿಂದುಳಿದ ಜಿಲ್ಲೆಗಳು ಲಸಿಕೆಯನ್ನು ತೀವ್ರಗೊಳಿಸಬೇಕು ಎಂದು ವೀಣಾ ಜಾರ್ಜ್ ಒತ್ತಾಯಿಸಿದರು.

                ಕೋವಿಡ್ ಮೂರನೇ ಅಲೆಯ ತೀವ್ರತೆಯನ್ನು ಎದುರಿಸಲು ರಾಜ್ಯ ಆರೋಗ್ಯ ಇಲಾಖೆಯು ಒಮಿಕ್ರಾನ್ ವಿಜಿಲೆನ್ಸ್ ಪ್ರಿವೆನ್ಷನ್ ಎಂಬ ವಿಶೇಷ ಶಿಬಿರವನ್ನು ಆಯೋಜಿಸುತ್ತದೆ. ಮುಂಜಾಗ್ರತಾ ಕ್ರಮಗಳ ಭಾಗವಾಗಿ ರಾಜ್ಯದಲ್ಲಿ ವ್ಯವಸ್ಥೆ ಮಾಡಲಾಗುವುದು.

               ಸಿ ಕೆಟಗರಿ ತಿರುವನಂತಪುರಕ್ಕೆ ಸಂಬಂಧಿಸಿದಂತೆ ವಿಶೇಷ ಪರಿಶೀಲನಾ ಸಭೆ ನಡೆಯಿತು. ಅಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚು. 50ರಷ್ಟು ಐಸಿಯು ಮಾತ್ರ ಉಳಿದಿದೆ. ಅದಕ್ಕಾಗಿಯೇ ಜಿಲ್ಲೆಯನ್ನು ಸಿ ವರ್ಗಕ್ಕೆ ಸೇರಿಸಲಾಗಿದೆ. ರಾಜಧಾನಿಯಲ್ಲಿ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಅವರು ಹೇಳಿದರು. ಕೊಟ್ಟಾಯಂ, ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಶಾಲಾ ಮಕ್ಕಳಿಗೆ ಲಸಿಕೆ ಹಾಕಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.


              

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries