ನವದೆಹಲಿ: ಜೆಎನ್ ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ದೆಹಲಿ ಕೋರ್ಟ್ ಆದೇಶ ನೀಡಿದೆ.
ಅಲೀಗಢ ಮುಸ್ಲಿಮ್ ವಿಶ್ವವಿದ್ಯಾನಿಲಯದಲ್ಲಿ ಹಾಗೂ ಜಾಮಿಯಾ ಏರಿಯಾದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೋರ್ಟ್ ಈ ಆದೇಶವನ್ನು ನೀಡಿದೆ.
ಇಮಾಮ್ ವಿರುದ್ಧ ದೇಶದ್ರೋಹದ ಪ್ರಕರಣಗಳ ಜೊತೆಗೆ, ಎರಡು ಗುಂಪುಗಳ ನಡುವೆ ಧರ್ಮ, ಜನಾಂಗ, ಜನ್ಮ ಸ್ಥಳ, ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ಉಂಟು ಮಾಡಿದ, ಸಾರ್ವಜನಿಕ ಕಿಡಿಗೇಡಿತನ ಯುಎಪಿಎ ಗಳ ಆರೋಪದ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಇದನ್ನೂ ಓದಿ: ಜೆಎನ್ ಯು ಕ್ಯಾಂಪಸ್ ನಲ್ಲಿ ಪಿಹೆಚ್ ಡಿ ವಿದ್ಯಾರ್ಥಿನಿಗೆ 27 ವರ್ಷದ ಯುವಕನಿಂದ ಲೈಂಗಿಕ ಕಿರುಕುಳ; ಆರೋಪಿ ಬಂಧನ
ಡಿ.2019 ರಲ್ಲಿ ಉಂಟಾದ ಗಲಭೆಗೆ ಮಂದಿಯನ್ನು ಪ್ರಚೋದಿಸಿದ್ದ, ಕೇಂದ್ರ ಸರ್ಕಾರಕ್ಕೆ ನಿಷ್ಠೆ ತೋರದಂತೆ ಜನತೆಯನ್ನು ಪ್ರಚೋದಿಸಿದ್ದ ಆರೋಪಗಳನ್ನು ದೆಹಲಿ ಪೊಲೀಸರು ಇಮಾಮ್ ವಿರುದ್ಧ ಹೊರಿಸಿದ್ದರು.