HEALTH TIPS

ಪ್ರಮಾಣಪತ್ರಕ್ಕಾಗಿ ಲಂಚ: ಎಂಜಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ವಿರುದ್ಧ ಎಬಿವಿಪಿ ಪ್ರತಿಭಟನೆ; ಕಾರ್ಯಕರ್ತರ ಬಂಧನ

                ಕೊಟ್ಟಾಯಂ: ಎಂಬಿಎ ಪ್ರಮಾಣ ಪತ್ರ ನೀಡಲು 1.25 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಘಟನೆಯಲ್ಲಿ ಅಧಿಕಾರಿಣಿ ಹಾಗೂ ಆಕೆಯ ಸಹಚರರನ್ನು ಉಚ್ಚಾಟಿಸುವಂತೆ ಒತ್ತಾಯಿಸಿ ಎಂಜಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು. ಮಾರ್ಚ್ ನಲ್ಲಿ ಪಾಲ್ಗೊಂಡ  ಕಾರ್ಯಕರ್ತರನ್ನು ಪೋಲೀಸರು ಬಂಧಿಸಿದರು.

                    ವಿಜಿಲೆನ್ಸ್ ಮೊನ್ನೆ ವಿಶ್ವವಿದ್ಯಾನಿಲಯದಲ್ಲಿ ಸಿಪಿಎಂ ಪರ ಒಕ್ಕೂಟದ ಅಧಿಕಾರಿಯನ್ನು ಬಂಧಿಸಿದ್ದರು. ಎಂಬಿಎ ಪ್ರಮಾಣ ಪತ್ರ ನೀಡಲು ವಿದ್ಯಾರ್ಥಿಯೊಬ್ಬರಿಂದ ಸುಮಾರು 1.5 ಲಕ್ಷ ರೂಪಾಯಿ ಲಂಚ ಪಡೆದಿದ್ದರು.

               ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ ಸಿ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ಘಟನೆ ಕುರಿತು ತನಿಖೆ ನಡೆಸಲು ಸಿಂಡಿಕೇಟ್ ಸಭೆ ಕರೆಯಲಾಗಿತ್ತು. ಎಬಿವಿಪಿ ರಾಜ್ಯ ಜಂಟಿ ಕಾರ್ಯದರ್ಶಿ ಅರವಿಂದ್ ಮತ್ತು ಕೊಟ್ಟಾಯಂ ಜಿಲ್ಲಾ ಕಾರ್ಯದರ್ಶಿ ಮೃದುಲ್ ಹಾಗೂ ಇತರ  ಏಳು ಕಾರ್ಯಕರ್ತರನ್ನು ಬಂಧಿಸಲಾಗಿದೆ.

                 ವಿಶ್ವವಿದ್ಯಾಲಯದ ಪ್ರವೇಶ ದ್ವಾರದ ಮುಂಭಾಗದಲ್ಲಿ ಪೋಲೀಸರೊಂದಿಗೆ ಕಾರ್ಯಕರ್ತರು ವಾಗ್ದಾಳಿ ನಡೆಸಿದರು. ಇದಾದ ಬಳಿಕ ಇಲ್ಲಿಯೇ ಕಾರ್ಯಕರ್ತರು ಕುಳಿತು ಪ್ರತಿಭಟನೆ ನಡೆಸಿದರು.

              ಘಟನೆಯ ಕುರಿತು ಸಮಗ್ರ ತನಿಖೆ ನಡೆಸಲು ವಿಶ್ವವಿದ್ಯಾಲಯದ ಸಿಂಡಿಕೇಟ್ ನಿರ್ಧರಿಸಿದೆ. ನಾಲ್ವರು ಸದಸ್ಯರ ಸಮಿತಿಯಿಂದ ವಿಚಾರಣೆ ನಡೆಯಲಿದೆ. ಏಳು ದಿನಗಳೊಳಗೆ ವರದಿ ಸಲ್ಲಿಸುವಂತೆ ಶಿಫಾರಸು ಮಾಡಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries