HEALTH TIPS

ಕೊಲೆ ಸಂಚು ಪ್ರಕರಣದಲ್ಲಿ ದಿಲೀಪ್‍ಗೆ ಹಿನ್ನಡೆ; ಪೋನ್ ಹಸ್ತಾಂತರಕ್ಕೆ ಹೈಕೋರ್ಟ್ ಆದೇಶ; ಚಿಂತೆ ಏಕೆ ಎಂದು ಪ್ರಶ್ನಿಸಿದ ನ್ಯಾಯಾಲಯ

                                     

                   ಕೊಚ್ಚಿ: ನಟಿ ಮೇಲಿನ ಹಲ್ಲೆ ಪ್ರಕರಣದ ತನಿಖಾಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ದಿಲೀಪ್ ಗೆ ಭಾರೀ ಹಿನ್ನಡೆಯಾಗಿದೆ. ಪೋನ್ ಹಸ್ತಾಂತರಿಸುವಂತೆ ಹೈಕೋರ್ಟ್ ಆದೇಶಿಸಿದೆ. ದಿಲೀಪ್ ತನಿಖೆಗಾಗಿ ತನ್ನ ಪೋನ್ ಏಕೆ ನೀಡುತ್ತಿಲ್ಲ, ಏಕೆ ಚಿಂತೆ ಮಾಡುತ್ತಿದ್ದೀರಿ ಎಂದು ಹೈಕೋರ್ಟ್ ಪ್ರಶ್ನಿಸಿದೆ.

                  ಸಾಕ್ಷ್ಯಾಧಾರಗಳನ್ನು ಒದಗಿಸುವ ಜವಾಬ್ದಾರಿ ದಿಲೀಪ್ ಮೇಲಿದೆ. ತನಿಖಾ ತಂಡಕ್ಕೆ ಅಗತ್ಯವಿರುವ ದಾಖಲೆಗಳನ್ನು ದಿಲೀಪ್ ನೀಡಬೇಕಿದೆ. ಪೋನ್ ಹಾಜರುಪಡಿಸದಿರುವುದು ಸರಿಯಾದ ಕ್ರಮವಲ್ಲ ಮತ್ತು ನಟನ ಮೇಲಿನ ಆರೋಪ ಗಂಭೀರವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಸತ್ಯಾಸತ್ಯತೆ ಹೊರತರುವುದು ತನಿಖಾ ತಂಡದ ಕೆಲಸ. ಹಾಗಾಗಿಯೇ ಪೋನ್ ಕೇಳುತ್ತಿದ್ದು, ಪ್ರತಿವಾದಿ ತನಿಖೆ ಬೇಡ ಎಂದು ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

                ಪ್ರಕರಣದಲ್ಲಿ ಜಾಮೀನು ಷರತ್ತುಗಳನ್ನು ದಿಲೀಪ್ ಉಲ್ಲಂಘಿಸಿದ್ದು, ತನಿಖೆಗೆ ಸಹಕರಿಸುತ್ತಿಲ್ಲ ಎಂದು ಪ್ರಾಸಿಕ್ಯೂಷನ್ ಹೇಳಿದೆ. ಪೋನ್‍ಗಳನ್ನು ವೈಜ್ಞಾನಿಕ ಪರಿಶೀಲನೆಗೆ ಒಳಪಡಿಸಬೇಕು ಎಂದು ಪ್ರಾಸಿಕ್ಯೂಷನ್ ಹೇಳಿದೆ.

                   ಆದರೆ, ಪಿತೂರಿ ನಡೆದ ಸಂದರ್ಭದಲ್ಲಿ ಪೋನ್‍ಗಳನ್ನು ಸಲ್ಲಿಸಲಾಗಿತ್ತು ಮತ್ತು ಈಗ ಹೊಸ ಪೋನ್ ಬಳಸಲಾಗುತ್ತಿದೆ ಎಂದು ದಿಲೀಪ್ ನ್ಯಾಯಾಲಯಕ್ಕೆ ತಿಳಿಸಿದರು. ಮೂರು ದಿನಗಳ ಕಾಲ ವಿಚಾರಣೆಗೆ ಹಾಜರಾಗಿದ್ದೇನೆ ಎಂದು ದಿಲೀಪ್ ನ್ಯಾಯಾಲಯಕ್ಕೆ ತಿಳಿಸಿದರು.

                    ಈ ಹಿಂದೆ ಪ್ರಾಸಿಕ್ಯೂಷನ್ ಕೋರಿಕೆಯ ಮೇರೆಗೆ ಅರ್ಜಿಯನ್ನು ಪರಿಗಣಿಸಲಾಗಿತ್ತು. ಪ್ರಸ್ತುತ ನ್ಯಾಯಾಲಯವು ದಿಲೀಪ್ ಅವರ ನಿರೀಕ್ಷಣಾ ಜಾಮೀನನ್ನು ಪರಿಗಣಿಸುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries