HEALTH TIPS

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ: ಚುನಾವಣಾ ಕಣದಲ್ಲಿ ಏನೇನು ವಿಶೇಷ...

 * ಗೋವಾ ವಿಧಾನಸಭೆ ಚುನಾವಣೆಗೆ ಟಿಎಂಸಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ಆರು ಜನರಿಗೆ ಸ್ಥಾನ ನೀಡಲಾಗಿದೆ. ಪಕ್ಷವು ಈವರೆಗೆ ಒಟ್ಟು 24 ಮಂದಿಯ ಟಿಕೆಟ್‌ಗಳನ್ನು ಕಾತರಿಪಡಿಸಿದೆ

* ಕಾಂಗ್ರೆಸ್‌ನ ಪ್ರಚಾರ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ಮುಸ್ಲಿಮರ ಯೋಧ ಎಂದು ಬಿಂಬಿಸಿಕೊಂಡಿದ್ದ ಪಂಜಾಬ್‌ನ ಮಾಜಿ ಪೊಲೀಸ್ ಮಹಾ ನಿರ್ದೇಶಕ ಮೊಹಮ್ಮದ್ ಮುಸ್ತಫಾ ಅವರನ್ನು ಬಂಧಿಸಬೇಕು' ಎಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಈ ಆರೋಪವನ್ನು ಮುಸ್ತಫಾ ನಿರಾಕರಿಸಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ

* ಮಣಿಪುರ ವಿಧಾನಸಭಾ ಚುನಾವಣೆಗೆ ನ್ಯಾಷನಲ್ ಪೀಪಲ್ಸ್ ಪಾರ್ಟಿಯು ತನ್ನ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷವು ಈಗಿನ ಬಿಜೆಪಿ ಸರ್ಕಾರದಲ್ಲಿ ಮೈತ್ರಿಯಲ್ಲಿದೆ. ಆದರೆ ಈ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಕಣಕ್ಕೆ ಇಳಿದಿದೆ. ಇನ್ನೂ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡುತ್ತೇವೆ ಎಂದು ಪಕ್ಷವು ಹೇಳಿದೆ

* ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಜ.27ರಂದು ಪಂಜಾಬ್‌ನಲ್ಲಿ ಪ್ರಚಾರ ನಡೆಸಲಿದ್ದಾರೆ. ಪಕ್ಷದ 117 ಅಭ್ಯರ್ಥಿಗಳ ಜತೆಗೆ ಅವರು ಅಮೃತಸರದ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ಪಕ್ಷದ ಪ್ರಕಟಣೆ ಹೇಳಿದೆ.


ಆಧಾರ: ಪಿಟಿಐ

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries