HEALTH TIPS

ಕಾಸರಗೋಡಲ್ಲಿ ಸಚಿವ ಅಹ್ಮದ್ ದೇವರಕೋವಿಲ್ ರಿಂದ ಧ್ವಜಾರೋಹಣ: ತಲೆಕೆಳಗಾಗಿ ರಾಷ್ಟ್ರ ಧ್ವಜಾರೋಹಣಗ್ಯೆದು ವಂದಿಸಿದ ಸಚಿವರು: ಪತ್ರಕರ್ತರಿಂದ ಪ್ರಮಾದದ ಸೂಚನೆ


       ಕಾಸರಗೋಡು: ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಲಾದ ಘಟನೆ ನಡೆದಿದೆ. ಅದು ನಮ್ಮ ಕಾಸರಗೋಡಲ್ಲಿ!
       ಜಿಲ್ಲಾ ಮಟ್ಟದ ಧ್ವಜಾರೋಹಣವನ್ನು ಸಚಿವ ಅಹ್ಮದ್ ದೇವರಕೋವ್ ನೆರವೇರಿಸಿದರು.  ಕಾಸರಗೋಡು ಮುನ್ಸಿಪಲ್ ಸ್ಟೇಡಿಯಂನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಈ ಘಟನೆ ನಡೆದಿದೆ.  ಧ್ವಜವನ್ನು ತಲೆಕೆಳಗಾಗಿ ಹಾರಿಸಿರುವುದು ಸಚಿವರಾಗಲೀ ಅಥವಾ ಇತರ ಅಧಿಕಾರಿಗಳಾಗಲೀ ಗಮನಕ್ಕೆ ಬಂದಿರಲಿಲ್ಲ.
       ರಾಷ್ಟ್ರಧ್ವಜ  ತಲೆಕೆಳಗಾಗಿ ಹಾರಿಸಿದ ನಂತರ ಸಚಿವ ಅಹಮದ್ ದೇವರಕೋವಿಲ್ ವಂದಿಸಿದರು.  ಇದಾದ ಬಳಿಕ ಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿದೆ ಎಂದು ಮಾಧ್ಯಮಗಳು ಗಮನ ಸೆಳೆದವು.  ಆಗ ಸಚಿವರು ಮತ್ತು ಇತರ ಅಧಿಕಾರಿಗಳು  ಗಮನಿಸಿದರು.  ನಂತರ ಧ್ವಜವನ್ನು ಮತ್ತೆ ಸರಿಯಾಗಿ ಹಾರಿಸಲಾಯಿತು.
        ಇಷ್ಟು ದೊಡ್ಡ ತಪ್ಪಾದರೂ ಸಚಿವರು ಹಾಗೂ ಇತರೆ ಪೊಲೀಸ್ ಅಧಿಕಾರಿಗಳಿಗೆ ತಪ್ಪಿನ ಅರಿವಾಗಲಿಲ್ಲ.  ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ವತಃ ಉಪಸ್ಥಿತರಿದ್ದರು.ಘಟನೆ ವಿವಾದವಾಗುವ ಸಾಧ್ಯತೆ ಕಂಡುಬಂದಿದೆ.

Post a Comment

1 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries