HEALTH TIPS

ನಟಿ ಮೇಲಿನ ಹಲ್ಲೆ ಪ್ರಕರಣ: ಹೆಚ್ಚಿನ ತನಿಖೆಗೆ ದಿಲೀಪ್ ಆಗ್ರಹ: ಸುಪ್ರೀಂ ಮೆಟ್ಟಲೇರಿದ ದಿಲೀಪ್

                                          

                ಕೊಚ್ಚಿ: ನಟಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಬೇಕು ಎಂಬ ರಾಜ್ಯ ಸರ್ಕಾರದ ಆಗ್ರಹದ ವಿರುದ್ಧ ದಿಲೀಪ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚಾರಣೆಯನ್ನು ವಿಸ್ತರಿಸದಂತೆ ಸುಪ್ರೀಂ ಕೋರ್ಟ್‍ಗೆ ಮನವಿ ಮಾಡಲಾಗಿದೆ. ಮುಂದಿನ ತನಿಖೆಗೆ ಸರಕಾರ ಮುಂದಾಗಿರುವುದು ಪ್ರಹಸನವಾಗಿದೆ. ಅಲ್ಲದೆ, ವಿಚಾರಣೆಯನ್ನು ತ್ವರಿತಗೊಳಿಸುವಂತೆ ದಿಲೀಪ್ ನ್ಯಾಯಾಲಯವನ್ನು ಕೋರಿದ್ದಾರೆ.

               ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ಇನ್ನಷ್ಟು ಕಾಲಾವಕಾಶ ಕೋರಿ ಸರ್ಕಾರ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಸರ್ಕಾರದ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ನಾಳೆ ಪರಿಗಣಿಸಲಿದೆ. ನ್ಯಾಯಮೂರ್ತಿಗಳಾದ ಎಂ.ಎಂ.ಖಾನ್ವಿಲ್ಕರ್ ಮತ್ತು ಸಿ.ಟಿ.ರವಿಕುಮಾರ್ ಅವರಿರುವ ಪೀಠವು ಅರ್ಜಿಯನ್ನು ಪರಿಗಣಿಸಲಿದೆ.

                 ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 16ರೊಳಗೆ ಪೂರ್ಣಗೊಳಿಸುವಂತೆ ಈ ಹಿಂದೆ ಸುಪ್ರಿಂ ಕೋರ್ಟ್ ಸೂಚಿಸಿತ್ತು. ಆದರೆ, ನಿರ್ದೇಶಕ ಬಾಲಚಂದ್ರಕುಮಾರ್ ಬಹಿರಂಗಪಡಿಸಿರುವ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆ ಅಗತ್ಯವಿದೆ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries