HEALTH TIPS

ರಾಜಪಥ್ ನಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಕೋವಿಂದ್: ಮರಣೋತ್ತರ ಅಶೋಕ ಚಕ್ರ ಪ್ರದಾನ, ಪರೇಡ್

           ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ 73 ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ್ದಾರೆ. 


         ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಾಥ್ ನೀಡಿದರು. ಧ್ವಜಾರೋಹಣದ ಬಳಿಕ ರಾಷ್ಟ್ರಪತಿಗಳು ಗೌರವ ವಂದನೆ ಸ್ವೀಕರಿಸಿದ್ದು, ಅಶೋಕ ಚಕ್ರ ಪ್ರದಾನ ಮಾಡಿದ್ದಾರೆ. 9 ಉಗ್ರರನ್ನು ಹೊಡೆದುರುಳಿಸಿದ್ದ ಜಮ್ಮು-ಕಾಶ್ಮೀರದ ಹುತಾತ್ಮ ಎಎಸ್ ಐ ಬಾಬು ರಾಮ್ ಅವರ ಕುಟುಂಬ ಸದಸ್ಯರು ಅಶೋಕ ಚಕ್ರ ಪದಕವನ್ನು ಸ್ವೀಕರಿಸಿದರು. ಈ ಬಳಿಕ ರಾಜ್ ಪಥ್ ನಲ್ಲಿ ಪರೇಡ್ ಪ್ರಾರಂಭವಾಗಿದೆ.

         ಧ್ವಜಾರೋಹಣಕ್ಕೂ ಮುನ್ನ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಥ್ ನೀಡಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries