ತಿರುವನಂತಪುರ: ರಾಜ್ಯದಲ್ಲಿ ಇಂದು 16,012 ಮಂದಿಗೆ ಕೋವಿಡ್ ದೃಢಪಟ್ಟಿದೆ. ಎರ್ನಾಕುಳಂ 2732, ತಿರುವನಂತಪುರ 1933, ಕೊಲ್ಲಂ 1696, ಕೊಟ್ಟಾಯಂ 1502, ತ್ರಿಶೂರ್ 1357, ಕೋಝಿಕ್ಕೋಡ್ 1258, ಆಲಪ್ಪುಳ 1036, ಇಡುಕ್ಕಿ 831, ಪತನಂತಿಟ್ಟ, 785, ಮಲಪ್ಪುರಂ 750, ಪಾಲಕ್ಕಾಡ್ 686, ಕಣ್ಣೂರು 633, ವಯನಾಡ್ 557, ಕಾಸರಗೋಡು 256 ಎಂಬಂತೆ ಕೋವಿಡ್ ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 80,089 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 3,57,327 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 3,50,089 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 7238 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಒಟ್ಟು 1141 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ, 2,05,410 ಕರೋನಾ ಪ್ರಕರಣಗಳಲ್ಲಿ, ಕೇವಲ 3.6 ಪ್ರತಿಶತದಷ್ಟು ಜನರು ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 27 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದಲ್ಲದೆ, ಹಿಂದಿನ ದಿನಗಳಲ್ಲಿ ದಾಖಲೆಗಳನ್ನು ತಡವಾಗಿ ಸ್ವೀಕರಿಸಿದ ಕಾರಣ 214 ಸಾವುಗಳು ಮತ್ತು ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 251 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 61,626ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 57 ಮಂದಿ ಹೊರ ರಾಜ್ಯದವರು. ಸಂಪರ್ಕದ ಮೂಲಕ ಒಟ್ಟು 14,685 ಮಂದಿ ಜನರು ಸೋಂಕಿಗೆ ಒಳಗಾಗಿದ್ದಾರೆ. 1140 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು 130 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಪತ್ತೆಯಾಗಿದೆ.
ಒಟ್ಟು 43,087 ಮಂದಿ ಜನರು ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ತಿರುವನಂತಪುರ 5213, ಕೊಲ್ಲಂ 6701, ಪತ್ತನಂತಿಟ್ಟ 2533, ಆಲಪ್ಪುಳ 2959, ಕೊಟ್ಟಾಯಂ 4135, ಇಡುಕ್ಕಿ 1560, ಎರ್ನಾಕುಲಂ 6251, ತ್ರಿಶೂರ್ 3132, ಪಾಲಕ್ಕಾಡ್ 1923, ಮಲಪ್ಪುರಂ 2293, ಕೋಝಿಕ್ಕೋಡ್ 2447, ವಯನಾಡ್ 1479, ಕಣ್ಣೂರು 1814, ಕಾಸರಗೋಡು 733 ಎಂಬಂತೆ ಗುಣಮುಖರಾಗಿದ್ದಾರೆ.