ತಿರುವನಂತಪುರ: ರಾಜ್ಯದಲ್ಲಿ ಇಂದು 23,253 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರ್ನಾಕುಳಂ 4441, ತಿರುವನಂತಪುರ 2673, ಕೊಟ್ಟಾಯಂ 2531, ಕೊಲ್ಲಂ 2318, ತ್ರಿಶೂರ್ 1790, ಕೋಝಿಕ್ಕೋಡ್ 1597, ಆಲಪ್ಪುಳ 1405, ಪತ್ತನಂತಿಟ್ಟ 1232, ಮಲಪ್ಪುರಂ 1200, ಇಡುಕ್ಕಿ 1052, ಕಣ್ಣೂರು 966, ಪಾಲಕ್ಕಾಡ್ 866, ವಯನಾಡ್ 803, ಕಾಸರಗೋಡು 379 ಎಂಬಂತೆ ಕೋವಿಡ್ ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 84,919 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 4,23,059 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 4,14,865 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 8194 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಒಟ್ಟು 1285 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಸ್ತುತ, 2,58,188 ಕೊರೋನಾ ಪ್ರಕರಣಗಳಲ್ಲಿ, ಕೇವಲ 3.3 ಪ್ರತಿಶತದಷ್ಟು ಜನರು ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 29 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದಲ್ಲದೆ, ಹಿಂದಿನ ದಿನಗಳಲ್ಲಿ ದಾಖಲೆಗಳನ್ನು ತಡವಾಗಿ ಸ್ವೀಕರಿಸಿದ ಕಾರಣ 198 ಸಾವುಗಳು ಮತ್ತು ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 627 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 60,793ಕ್ಕೆ ಏರಿಕೆಯಾಗಿದೆ.
ಇಂದು, ಸೋಂಕು ಪತ್ತೆಯಾದವರಲ್ಲಿ 53 ಮಂದಿ ಜನರು ಹೊರ ರಾಜ್ಯದವರು. 21,366 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 1627 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು 207 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢಪಡಿಸಲಾಗಿದೆ.
ಇಂದು 47,882 ಮಂದಿ ಕೋವಿಡ್ ಬಾಧಿತರು ಗುಣಮುಖರಾಗಿದ್ದಾರೆ. ತಿರುವನಂತಪುರ 5437, ಕೊಲ್ಲಂ 2592, ಪತ್ತನಂತಿಟ್ಟ 1350, ಆಲಪ್ಪುಳ 2861, ಕೊಟ್ಟಾಯಂ 3002, ಇಡುಕ್ಕಿ 1548, ಎರ್ನಾಕುಳಂ 9781, ತ್ರಿಶೂರ್ 7307, ಪಾಲಕ್ಕಾಡ್ 3005, ಮಲಪ್ಪುರಂ 2696, ಕೋಝಿಕ್ಕೋಡ್ 4450, ವಯನಾಡ್ 959, ಕಣ್ಣೂರು 2295, ಕಾಸರಗೋಡು 599 ಎಂಬಂತೆ ಗುಣಮುಖರಾಗಿದ್ದಾರೆ.

