ಧರ್ಮಶಾಲಾ: 3ನೇ ಟಿ20 ಪಂದ್ಯದಲ್ಲೂ ಶ್ರೀಲಂಕಾ ತಂಡವನ್ನು 6 ವಿಕೆಟ್ ಗಳಿಂದ ಮಣಿಸಿದ ಭಾರತ ತಂಡ 3-0 ಅಂತರದಲ್ಲಿ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಧರ್ಮಶಾಲಾದಲ್ಲಿ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಶ್ರೀಲಂಕಾ ನೀಡಿದ 147ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಟೀಂ ಇಂಡಿಯಾ 16.5 ಓವರ್ ನಲ್ಲಿ 4 ವಿಕೆಟ್ ಕಳೆದುಕೊಂಡು 148ರನ್ ಗಳಿಸಿ 6 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯಗಳಿಸಿತು. ಆರಂಭಿಕ ಆಘಾತದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಶ್ರೇಯಸ್ ಅಯ್ಯರ್ ಮತ್ತು ರವೀಂದ್ರ ಜಡೇಜಾ ಅವರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದಾಗಿ ಭಾರತ ಶ್ರೀಲಂಕಾ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಲ್ಲಿ ಗೆದ್ದು ಮತ್ತೊಂದು ವೈಟ್ ವಾಶ್ ಜಯ ಸಾಧಿಸಿದೆ. ಲಂಕಾ ವಿರುದ್ಧ ಅಜೇಯ 73ರನ್ ಗಳಿಸಿದ ಶ್ರೇಯಸ್ ಅಯ್ಯರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಲಂಕಾ ಪರ ಲಾಹಿರು ಕುಮಾರ 2, ಚಮೀರಾ ಮತ್ತು ಕರುಣರತ್ನೆ ತಲಾ ಒಂದೊಂದು ವಿಕೆಟ್ ಪಡೆದರು.