HEALTH TIPS

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಅವಿರತ ಶ್ರಮಿಸುತ್ತಿದೆ: ಪ್ರಧಾನಿ ಮೋದಿ

               ಬಸ್ತಿ: ಯುದ್ಧ ಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಸರ್ಕಾರ ಅವಿರತವಾಗಿ ಶ್ರಮಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

            ಉತ್ತರ ಪ್ರದೇಶದ ಬಸ್ತಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಜಗತ್ತಿನಲ್ಲಿ ಚಾಲ್ತಿಯಲ್ಲಿರುವ ಪ್ರಕ್ಷುಬ್ಧತೆಯನ್ನು ತಿಳಿಸಿದರು. ಅಲ್ಲದೆ ದೇಶವನ್ನು ಆತ್ಮನಿರ್ಭರ್ ಮಾಡುವ ಮೂಲಕ ಬಲಪಡಿಸಲಾಗುತ್ತಿದೆ ಎಂದರು. 

            ಉಕ್ರೇನ್‌ನಲ್ಲಿ ರಷ್ಯಾ ಸೇನಾ ದಾಳಿಯ ನಡುವೆ ಸಿಲುಕಿರುವ ತನ್ನ ನಾಗರಿಕರನ್ನು ಸ್ಥಳಾಂತರಿಸುವ ಕಾರ್ಯವನ್ನು ಭಾರತ ಶನಿವಾರ ಆರಂಭಿಸಿದೆ. ನಾಗರಿಕ ವಿಮಾನ ಕಾರ್ಯಾಚರಣೆಗಳಿಗಾಗಿ ಉಕ್ರೇನ್ ವಾಯುಪ್ರದೇಶವನ್ನು ಮುಚ್ಚಿರುವುದರಿಂದ ಭಾರತೀಯ ಸ್ಥಳಾಂತರಿಸುವ ವಿಮಾನಗಳು ರೊಮೇನಿಯನ್ ರಾಜಧಾನಿ ಬುಕಾರೆಸ್ಟ್ ಮತ್ತು ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌ನಿಂದ ಕಾರ್ಯನಿರ್ವಹಿಸುತ್ತಿವೆ ಎಂದರು. 

           ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿ ದೇಶವನ್ನು 'ಆತ್ಮನಿರ್ಭರ್' ಮಾಡುವ ಮೂಲಕ ಬಲಪಡಿಸುವ ಸಮಯ ಬಂದಿದೆ. ವಂಶಪಾರಂಪರೆ ನೇತೃತ್ವದ ಹಿಂದಿನ ಸರ್ಕಾರಗಳು ಭಾರತವನ್ನು ತನ್ನ ರಕ್ಷಣಾ ಅಗತ್ಯಗಳಿಗಾಗಿ ವಿದೇಶಗಳ ಮೇಲೆ ಅವಲಂಬಿತವಾಗಿ(ನಿರ್ಭರ್) ಇರಿಸಿದ್ದವು, ಆದರೆ ಈಗ ಆದ್ಯತೆಯು 'ಆತ್ಮನಿರ್ಭರ್' ಆಗಿದೆ ಎಂದು ಅವರು ಹೇಳಿದರು.

           ರಾಷ್ಟ್ರ ಭಕ್ತಿ(ರಾಷ್ಟ್ರದ ಭಕ್ತಿ) ಮತ್ತು ಪರಿವಾರ ಭಕ್ತಿ(ಕುಟುಂಬದ ಮೇಲಿನ ಭಕ್ತಿ) ನಡುವೆ ವ್ಯತ್ಯಾಸವಿದೆ. ಅವರು ತಮ್ಮ ಪ್ರತಿಸ್ಪರ್ಧಿಗಳ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ. ಫೆಬ್ರವರಿ 26ರಂದು ದೇಶವು ಬಾಲಾಕೋಟ್ ವೈಮಾನಿಕ ದಾಳಿಯ ಮೂರು ವರ್ಷಗಳನ್ನು ಆಚರಿಸಿತು. ಆದರೆ ವಂಶಪಾರಂಪರೆ ಕುಟುಂಬ ಅದಕ್ಕೆ ಪುರಾವೆಗಳನ್ನು ಕೇಳಿದ್ದವು ಎಂದು ಅವರು ಹೇಳಿದರು.

             2019ರಲ್ಲಿ ಸುಮಾರು 40 ಭದ್ರತಾ ಪಡೆಗಳ ಯೋಧರು ಹುತಾತ್ಮರಾದ ಪುಲ್ವಾಮಾ ಭಯೋತ್ಪಾದಕ ದಾಳಿಯ ಕೆಲವು ದಿನಗಳ ನಂತರ ಭಾರತವು ಪಾಕಿಸ್ತಾನದಲ್ಲಿ ಭಯೋತ್ಪಾದಕ ಲಾಂಚ್ ಪ್ಯಾಡ್‌ಗಳ ಮೇಲೆ ವೈಮಾನಿಕ ದಾಳಿ ನಡೆಸಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries