HEALTH TIPS

ಸಚಿವೆ ಆರ್. ಬಿಂದುವಿಗೆ ಕ್ಲೀನ್ ಚಿಟ್; ಸಚಿವೆ ಅಧಿಕಾರ ದುರುಪಯೋಗ ಮಾಡಿಲ್ಲ:ಲೋಕಾಯುಕ್ತ


      ತಿರುವನಂತಪುರ: ಕಣ್ಣೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳ ಮರುನೇಮಕ ವಿಚಾರದಲ್ಲಿ ಉನ್ನತ ಶಿಕ್ಷಣ ಸಚಿವೆ ಆರ್.ಬಿಂದು ವಿರುದ್ಧ ಕಾಂಗ್ರೆಸ್ ಮುಖಂಡ ರಮೇಶ್ ಚೆನ್ನಿತ್ತಲ ಸಲ್ಲಿಸಿದ್ದ ಅರ್ಜಿಯನ್ನು ಲೋಕಾಯುಕ್ತ ತಿರಸ್ಕರಿಸಿದೆ.
      ಸಚಿವರು ರಾಜ್ಯಪಾಲರ ಮೇಲೆ ಅನಗತ್ಯ ಒತ್ತಡ ಹೇರಿಲ್ಲ ಎಂದು ಲೋಕಾಯುಕ್ತರು ತಿಳಿಸಿದ್ದಾರೆ.  ಸಚಿವರು ಕೇವಲ ಸೂಚನೆಗಳನ್ನು ನೀಡಿದರು.  ಅವರಿಗೆ ಮತ್ತೊಮ್ಮೆ ಅವಕಾಶ ನೀಡುವುದು ಉತ್ತಮ ಎಂಬ ಸಚಿವರ ಸಲಹೆಯನ್ನು ಕುಲಪತಿ ಒಪ್ಪಿಕೊಂಡಿದ್ದಾರೆ ಎಂದು ಲೋಕಾಯುಕ್ತರು ತಿಳಿಸಿದ್ದಾರೆ.
        ಕಣ್ಣೂರು ವಿಶ್ವವಿದ್ಯಾನಿಲಯದ ನಿಯಮಗಳಲ್ಲಿ ವಿಸಿಯ ವಯೋಮಿತಿಯನ್ನು ಉಲ್ಲೇಖಿಸಿಲ್ಲ ಎಂದು ಲೋಕಾಯುಕ್ತರು ಬೊಟ್ಟುಮಾಡಿದರು.ಕಣ್ಣೂರಿನ ವಿಸಿ ನೇಮಕಕ್ಕೆ ಸಂಬಂಧಿಸಿದ ದೂರನ್ನು ಪರಿಗಣಿಸುತ್ತಿಲ್ಲ.  ಇದೀಗ ಸಚಿವರ ವಿರುದ್ಧದ ದೂರನ್ನು ಮಾತ್ರ ಪರಿಗಣಿಸಲಾಗುತ್ತಿದೆ ಎಂದು ಲೋಕಾಯುಕ್ತರು ತಿಳಿಸಿದ್ದಾರೆ.
        ಸಚಿವರು ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ, ವಿಸಿ ನೇಮಕದ ಸಂಪೂರ್ಣ ಅಧಿಕಾರ ರಾಜ್ಯಪಾಲರಿಗೆ ಇದೆ ಎಂದು ಲೋಕಾಯುಕ್ತರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries