ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಮೂರನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಮುದ್ದಿನ ಸಾಕು ನಾಯಿಯನ್ನು ಬಿಟ್ಟು ದೇಶ ಬಿಡಲು ನಿರಾಕರಿಸಿರುವ ವಿದ್ಯಮಾನ ವರದಿಯಾಗಿದೆ.
ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಮೂರನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಮುದ್ದಿನ ಸಾಕು ನಾಯಿಯನ್ನು ಬಿಟ್ಟು ದೇಶ ಬಿಡಲು ನಿರಾಕರಿಸಿರುವ ವಿದ್ಯಮಾನ ವರದಿಯಾಗಿದೆ.
ಪೂರ್ವ ಉಕ್ರೇನ್ನ ಖಾರ್ಕಿವ್ ನ್ಯಾಷನಲ್ ಯೂನಿವರ್ಸಿಟಿ ಆಫ್ ರೇಡಿಯೋ ಎಲೆಕ್ಟ್ರಾನಿಕ್ಸ್ನಲ್ಲಿ ಓದುತ್ತಿರುವ ರಿಷಭ್ ಕೌಶಿಕ್, ತಾನು ವಿಮಾನಯಾನ ಮಾಡುವಾಗ ತನ್ನ ನಾಯಿಯು ತನ್ನೊಂದಿಗೆ ಬರಲು ಎಲ್ಲಾ ದಾಖಲೆಗಳು ಮತ್ತು ಅನುಮತಿಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾನೆ.
"ಅವರು ನನ್ನ ವಿಮಾನ ಟಿಕೆಟ್ ಕೇಳುತ್ತಿದ್ದಾರೆ. ಉಕ್ರೇನಿಯನ್ ವಾಯುಪ್ರದೇಶವನ್ನು ಮುಚ್ಚಿರುವಾಗ ನನ್ನಲ್ಲಿ ವಿಮಾನ ಟಿಕೆಟ್ ಇರಲು ಹೇಗೆ ಸಾಧ್ಯ? ಎಂದು ಅವರು ಪ್ರಶ್ನಿಸಿದರು.
'ದಿಲ್ಲಿಯಲ್ಲಿರುವ ಭಾರತೀಯ ಸರಕಾರದ ಅನಿಮಲ್ ಕ್ವಾರಂಟೈನ್ ಹಾಗೂ ಪ್ರಮಾಣೀಕರಣ ಸೇವೆ (ಎಕ್ಯೂಸಿಎಸ್) ಮತ್ತು ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ'' ಎಂದು ಕೌಶಿಕ್ ಅವರು ಹೇಳುತ್ತಾರೆ.
ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ ವೀಡಿಯೊದಲ್ಲಿ, ತನ್ನ ಪರಿಸ್ಥಿತಿಯ ಬಗ್ಗೆ ದಿಲ್ಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಯಾರೋ ಒಬ್ಬರಿಗೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದ್ದೇನೆ. ಆದರೆ ಇನ್ನೊಂದು ತುದಿಯಲ್ಲಿದ್ದ ವ್ಯಕ್ತಿ ತನ್ನನ್ನು ನಿಂದಿಸಿದರು ಮತ್ತು ನನಗೆ ಸಹಕರಿಸಲಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.