HEALTH TIPS

ತಿರುಪತಿ ಬೆಟ್ಟದ ಬಳಿ ಖಾಸಗಿ ತಿನಿಸುಗಳು, ರೆಸ್ಟೋರೆಂಟ್ ಗಳಿಗೆ ಅನುಮತಿ ಇಲ್ಲ!

           ಹೈದರಾಬಾದ್: ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ 12 ದೇವಸ್ಥಾನಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ, ಬೆಟ್ಟದ ಮೇಲಿನ ದೇವಸ್ಥಾನದ ಪಟ್ಟಣದಲ್ಲಿ ಯಾವುದೇ ಖಾಸಗಿ ತಿನಿಸುಗಳು ಮತ್ತು ರೆಸ್ಟೋರೆಂಟ್ ಗಳಿಗೆ ಅನುಮತಿ ನೀಡದಿರಲು ನಿರ್ಧರಿಸಿದೆ.

              ಇದರ ಬದಲಾಗಿ ಬದಲಾಗಿ, ಇದು ಇನ್ನೂ ಅನೇಕ ಉಚಿತ ಅನ್ನ ಪ್ರಸಾದದ ಊಟದ ಮಳಿಗೆಗಳು ಮತ್ತು ಕಿಯೋಸ್ಕ್ ಗಳನ್ನು ಸ್ಥಾಪಿಸಲು ನಿರ್ಧರಿಸಿರುವುದರ ಜೊತೆಗೆ ಇತರ ಉದ್ಯಮಗಳನ್ನು ನಡೆಸುವುದಕ್ಕೆ ಅನುಮತಿ ನೀಡಲಾಗುತ್ತಿದೆ.

             ಮುಂಬೈನಲ್ಲಿ ಶ್ರೀವಾರಿ ದೇವಸ್ಥಾನ ನಿರ್ಮಿಸಲು ಭೂಮಿಗೆ ಅನುಮತಿ ಪಡೆಯಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಒಂದು ತಿಂಗಳೊಳಗೆ ಭೇಟಿ ಮಾಡಲು ಪ್ರಯತ್ನಿಸಲಾಗುವುದು. ಜೊತೆಗೆ ಆರ್ಜಿತಾ ಸೇವಾ ಟಿಕೆಟ್ ಗಳನ್ನು ಹೆಚ್ಚಿಸಲಾಗುವುದು ಎಂದು ಟ್ರಸ್ಟ್ ಹೇಳಿದೆ.

           ಗುರುವಾರ ನಡೆದ ಮಂಡಳಿಯ ಸಭೆಯ ನಂತರ, 2023 ರ ಆರ್ಥಿಕ ವರ್ಷಕ್ಕೆ ದೇವಾಲಯದ ಪಾಲನೆ ಮತ್ತು ಸಂಬಂಧಿತ ವೆಚ್ಚಗಳಿಗಾಗಿ ₹ 3,096 ಕೋಟಿಯನ್ನು ಬಜೆಟ್‌ಗೆ ಅನುಮೋದಿಸಲಾಗಿದೆ ಎಂದು ಟಿಟಿಡಿ ತಿಳಿಸಿದೆ. ದೇವಾಲಯಗಳ ಒಕ್ಕೂಟವನ್ನು ನಿರ್ವಹಿಸುವ ಸ್ವತಂತ್ರ ಟ್ರಸ್ಟ್‌ನ ಟಿಟಿಡಿ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಹಲವಾರು ಕ್ರಮಗಳನ್ನು ಕೈಗೊಂಡಿದೆ.

             ಟಿಟಿಡಿ ಟ್ರಸ್ಟ್ ಬೋರ್ಡ್ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ಮಾತನಾಡಿ, ಕೋವಿಡ್-19 ಸಾಂಕ್ರಾಮಿಕದ ತೀವ್ರತೆಯು ದೇಶಾದ್ಯಂತ ಕಡಿಮೆಯಾಗಿದೆ ಮತ್ತು ಸರ್ಕಾರದ ನಿರ್ದೇಶನಗಳನ್ನು ಅನುಸರಿಸಿ, ಮಾರ್ಚ್ 2020 ರಿಂದ ಸ್ಥಗಿತಗೊಂಡಿದ್ದ ಅರ್ಜಿತ ಸೇವೆಗಳು ಮತ್ತು ದರ್ಶನಗಳನ್ನು ಪುನರಾರಂಭಿಸಲಾಗುವುದು. ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಸೂಚಿಸಿದಂತೆ ಮಕ್ಕಳಿಗಾಗಿ ಆಸ್ಪತ್ರೆಯನ್ನು ೨೩೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಟ್ರಸ್ಟ್ ಅನುಮೋದನೆ ನೀಡಿದೆ ಎಂದು ಹೇಳಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries