HEALTH TIPS

ಕನ್ಹಯ್ಯಾ ಕುಮಾರ್ ಮೇಲೆ ಮಸಿ ಎಸೆತ; ಅದು ಆಸಿಡ್ ಎಂದ ಕಾಂಗ್ರೆಸ್ ಮುಖಂಡರು

          ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದ ಮಾಜಿ ವಿದ್ಯಾರ್ಥಿ ನಾಯಕ ಕನ್ಹಯ್ಯಾ ಕುಮಾರ್ ಅವರ ಮೇಲೆ ಲಖನೌದ ಕಾಂಗ್ರೆಸ್ ಕಚೇರಿಯಲ್ಲಿ ಮಸಿ ಎರಚಲಾಗಿದೆ.

        ಕುಮಾರ್ ಅವರ ಮೇಲೆ ಎಸೆದದ್ದು ಮಸಿ ಅಲ್ಲ, ಆದರೆ ಒಂದು ರೀತಿಯ ಆಸಿಡ್. ಆರೋಪಿಗಳು ಕನ್ಹಯ್ಯಾ ಕುಮಾರ್ ಮೇಲೆ ಆಸಿಡ್ ಎಸೆಯಲು ಪ್ರಯತ್ನಿಸಿದರು. ಆದರೆ ಅದು ವಿಫಲವಾಯಿತು. ಆದರೆ, ಕೆಲವು ಹನಿಗಳು ಸಮೀಪದಲ್ಲಿ ನಿಂತಿದ್ದ 3-4 ಯುವಕರ ಮೇಲೆ ಬಿದ್ದಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

           ಪಕ್ಷದ ಕಾರ್ಯಕರ್ತರು ಆರೋಪಿಯನ್ನು ಹಿಡಿದಿದ್ದು, ಆತನನ್ನು ದೇವಾಂಶ್ ಬಾಜಪೈ ಎಂದು ಗುರುತಿಸಲಾಗಿದೆ. ಆದರೆ ಆತ ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ. ಲಖನೌದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲು ಕನ್ಹಯ್ಯಾ ಕುಮಾರ್ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದರು.

         ಹತ್ರಾಸ್, ಉನ್ನಾವ್ ಮತ್ತು ಲಖೀಂಪುರ ಖೇರಿ ಘಟನೆ ನಡೆದಾಗಿನಿಂದ ಕಾಂಗ್ರೆಸ್ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದೆ. ದೇಶವನ್ನು ಕಟ್ಟದವರು ದೇಶವನ್ನು ಮಾರುತ್ತಿದ್ದಾರೆ, ಕಾಂಗ್ರೆಸ್ ಭಾರತವನ್ನು ನಿರ್ಮಿಸಿದೆ, ಆದ್ದರಿಂದ ದೇಶವನ್ನು ಮಾರುತ್ತಿರುವವರಿಂದ ದೇಶವನ್ನು ಉಳಿಸುತ್ತಿದೆ ಕನ್ಹಯ್ಯಾ ಕುಮಾರ್ ಅವರು ಹೇಳಿದ್ದಾರೆ.

             2018 ರಲ್ಲಿ ಗ್ವಾಲಿಯರ್ ನಲ್ಲಿ ತಮ್ಮ ಸಂವಿಧಾನ ಬಚಾವೋ” ಪ್ರತಿಭಟನೆಯ ಭಾಗವಾಗಿ ಚೇಂಬರ್ ಆಫ್ ಕಾಮರ್ಸ್ ಭವನದಲ್ಲಿ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಲು ಬಂದಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಕನ್ಹಯ್ಯಾ ಕುಮಾರ್ ಮೇಲೆ ವ್ಯಕ್ತಿಯೊಬ್ಬ ಶಾಯಿ ಎಸೆದಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries