HEALTH TIPS

ಪ್ರಯಾಣಿಕ ದಟ್ಟಣೆ ಮಾರ್ಗಗಳಲ್ಲಿ 'ಕವಚ' ಅಳವಡಿಕೆ: ರೈಲ್ವೆ ಇಲಾಖೆ

            ನವದೆಹಲಿ: ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ 'ರೈಲುಗಳ ಡಿಕ್ಕಿ ತಪ್ಪಿಸುವ ವ್ಯವಸ್ಥೆ' (ಟಿಸಿಎಎಸ್‌)ಯನ್ನು ಪ್ರಯಾಣಿಕರ ಭಾರಿ ದಟ್ಟಣೆ ಇರುವ ದೆಹಲಿ-ಮುಂಬೈ ಮತ್ತು ದೆಹಲಿ-ಹೌರಾ ಮಾರ್ಗಗಗಳಲ್ಲಿ ಅಳವಡಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ.

          'ಕವಚ' ಎಂದೂ ಕರೆಯಲಾಗುವ ಈ ವ್ಯವಸ್ಥೆಯನ್ನು ಮೊದಲ ಹಂತದಲ್ಲಿ ಈ ಎರಡು ಮಾರ್ಗಗಳಲ್ಲಿ ಅಳವಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

         ಎರಡನೇ ಹಂತದಲ್ಲಿ ಮುಂಬೈ-ಚೆನ್ನೈ, ಹೌರಾ-ಚೆನ್ನೈ ಮಾರ್ಗಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದ್ದು, ಸಮೀಕ್ಷಾ ಕಾರ್ಯ ನಡೆಯುತ್ತಿದೆ. 'ಪೂರ್ವ ಸರಕು ಕಾರಿಡಾರ್'ನಲ್ಲೂ (ಡಿಎಫ್‌ಸಿ) ಈ ವ್ಯವಸ್ಥೆಯನ್ನು ಅಳವಡಿಸಲು ರೈಲ್ವೆ ಉದ್ದೇಶಿಸಿದೆ ಎಂದು ಮೂಲಗಳು ಹೇಳಿವೆ.

'ಕವಚ' ವ್ಯವಸ್ಥೆಯನ್ನು ಅಳವಡಿಸುವ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ನಲ್ಲಿ ಘೋಷಿಸಿದ್ದರು.

               'ಸಂಶೋಧನೆ, ವಿನ್ಯಾಸ ಹಾಗೂ ಮಾನಕ ಸಂಸ್ಥೆ' (ಆರ್‌ಡಿಎಸ್‌ಒ) ಹಾಗೂ ಸಹವರ್ತಿ ಸಂಶೋಧನಾ ಸಂಸ್ಥೆಗಳು ಈ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries