HEALTH TIPS

ಪಂಜಾಬ್‌ನಲ್ಲಿ ರಾಹುಲ್‌ ಗಾಂಧಿಗೂ ಭದ್ರತಾ ಲೋಪ! ಸಿಎಂ ಕೂಡ ಪ್ರಯಾಣಿಸುತ್ತಿದ್ದ ಕಾರಿನತ್ತ ಬಾವುಟ ಎಸೆದ ವ್ಯಕ್ತಿ.

            ಲೂಧಿಯಾನ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ಕಲ್ಪಿಸುವಲ್ಲಿ ವಿಫಲವಾಗಿ ಭಾರಿ ಟೀಕೆಗೆ ಗುರಿಯಾಗಿದ್ದ ಪಂಜಾಬ್‌ನಲ್ಲಿ ಈಗ ಸಂಸದ ರಾಹುಲ್‌ ಗಾಂಧಿ ಮಾತ್ರವಲ್ಲದೇ ಖುದ್ದು ಪಂಜಾಬ್‌ ಮುಖ್ಯಮಂತ್ರಿ ಚರಣ್​​​​ಜಿತ್​​ ಚನ್ನಿಗೂ ಭದ್ರತಾ ಲೋಪ ಉಂಟಾಗಿದೆ.

         ಮುಂದಿನ ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲು ರಾಹುಲ್ ಲೂಧಿಯಾನಕ್ಕೆ ತೆರಳುವ ಸಮಯದಲ್ಲಿ ಕಾರಿನತ್ತ ಯುವಕನೊಬ್ಬ ಬಾವುಟ ಎಸೆದಿದ್ದು, ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾಯಿತು. ಈ ಕಾರಿನಲ್ಲಿ ರಾಹುಲ್‌ ಗಾಂಧಿ ಜತೆಗೆ ಪಂಜಾಬ್ ಮುಖ್ಯಮಂತ್ರಿ ಚರಣ್​​​​ಜಿತ್​​ ಚನ್ನಿ ಮತ್ತು ಪಿಸಿಸಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಹಿಂದೆ ಕುಳಿತಿದ್ದರು. ಕಾಂಗ್ರೆಸ್ ಹಿರಿಯ ನಾಯಕ ಸುನೀಲ್ ಜಾಖಡ್​ ಕಾರು ಚಾಲನೆ ಮಾಡುತ್ತಿದ್ದರು.

            ಹಲ್ವಾರದಿಂದ ಲೂಧಿಯಾನದ ಹಯಾತ್ ರೀಜೆನ್ಸಿಗೆ ತೆರಳುವ ವೇಳೆ ಈ ಘಟನೆ ನಡೆದಿದೆ. ಕಾರು ಹರ್ಷಿಲಾ ರೆಸಾರ್ಟ್ ಬಳಿ ಬಂದಾಗ ರಾಹುಲ್ ಗಾಂಧಿ ಅವರು ಕಾರಿನ ಕಿಟಿಕಿಯ ಬಾಗಿಲು ತೆರೆದು ಶುಭಾಶಯಗಳನ್ನು ಸ್ವೀಕರಿಸುತ್ತಿದ್ದರು. ಆ ವೇಳೆ ಕಾರಿನತ್ತ ಯುವಕನೊಬ್ಬ ಬಾವುಟ ಎಸೆದಿದ್ದಾನೆ. ಕೂಡಲೇ ರಾಹುಲ್‌ ಗಾಂಧಿ ಕಾರಿನ ಗಾಜುಗಳನ್ನು ಮುಚ್ಚಿದ್ದಾರೆ.

           ಧ್ವಜ ಎಸೆದ ಯುವಕ ಜಮ್ಮು ಕಾಶ್ಮೀರದ ನಿವಾಸಿ ಎಂದು ಹೇಳಲಾಗಿದೆ. ಈತ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘದ (ಎನ್‌ಎಸ್‌ಯುಐ) ಕಾರ್ಯಕರ್ತನಾಗಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries